Featured

ಅತ್ಯಾಚಾರಿಗಳ ಎನ್ಕೌಂಟರ್ ಪ್ರಕರಣ ಒಂದು ಯೋಜಿತ ಕೊಲೆ : ಮಾನವ ಹಕ್ಕುಗಳ ಸಂಸ್ಥೆ -Vishwanews24

ನವದೆಹಲಿ: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳ ಎನ್‍ಕೌಂಟರ್ ಪ್ರಕರಣ ಒಂದು ಯೋಜಿತ ಕೊಲೆ ಎಂದು ಮಾನವಹಕ್ಕುಗಳ ಸಂಸ್ಥೆ ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್’ ಆರೋಪ ಮಾಡಿ, 4 ಪ್ರಶ್ನೆಗಳನ್ನು ಮುಂದಿಟ್ಟಿದೆ.

ಪೊಲೀಸರ ಕಾರ್ಯಕ್ಕೆ ದೇಶಾದ್ಯಂತ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ಮಾನವಹಕ್ಕುಗಳ ಸಂಸ್ಥೆ (ಪಿಯುಸಿಎಲ್) ಮಾತ್ರ ಪ್ರಕರಣಕ್ಕೆ ಸಂಬಂಧಸಿದಂತೆ 4 ಪ್ರಶ್ನೆಗಳನ್ನು ಮುಂದಿಟ್ಟಿದೆ.

1.ಅಪರಾಧದ ದೃಶ್ಯವನ್ನು ಮರುಸೃಷ್ಟಿ ಮಾಡಲು ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಅದು 50ಕ್ಕೂ ಹೆಚ್ಚು ಮಂದಿ ತೆಲಂಗಾಣ ಪೊಲೀಸ್ ನೇತೃತ್ವದಲ್ಲಿ ನಡೆಸಿದ್ದು ಏಕೆ ?

2. ಆರೋಪಿಗಳನ್ನು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಅವರು ಯಾವುದೇ ಶಸ್ತ್ರಗಳನ್ನು ಹೊಂದಿರಲಿಲ್ಲ. ಅಲ್ಲದೇ ಆರೋಪಿಗಳ ಕೈಗೆ ಕೊಳ ಹಾಕಿ, ಮುಖವನ್ನು ಮುಚ್ಚಿ ಘಟನಾ ಸ್ಥಳಕ್ಕೆ ಕರೆತರಲಾಗಿತ್ತು. ಈ ಮಾರ್ಗ ಬಿಟ್ಟರೇ ಅವರನ್ನು ಕ್ರೈಂ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಲು ಬೇರೆ ದಾರಿಯೇ ಇರಲಿಲ್ಲ. ಆದರೆ ಅವರು ಹೇಗೆ ಪೊಲೀಸರಿಂದ ತಪ್ಪಿಸಿಕೊಂಡು ಅಷ್ಟು ದೂರ ಹೋಗಿದ್ದು ಹೇಗೆ ?

3. ಗುಂಡು ಹಾರಿಸಲು ಅವರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರಾ? ನಾಲ್ವರು ಆರೋಪಿಗಳ ಎನ್‍ಕೌಂಟರ್ ಮಾಡಲು ಅವರು ಮಾಡಿದ ಪ್ರಚೋದನೆ ಆದರೂ ಏನು?

4. ಆರೋಪಿಗಳು ಯಾವುದೇ ಶಸ್ತ್ರ ಹೊಂದಿರಲಿಲ್ಲ. ಪೊಲೀಸರಿಗೆ ಶೂಟ್ ಮಾಡುವ ಅನಿವಾರ್ಯ ಪರಿಸ್ಥಿತಿ ಎದುರಾಗಿದ್ದರು ಕೂಡ ಆರೋಪಿಗಳ ಮೊಣಕಾಲಿನ ಕೆಳಭಾಗಕ್ಕೆ ಶೂಟ್ ಮಾಡಿ ಅವರನ್ನು ತಡೆಯಬಹುದಿತ್ತು. ಆದರೆ ಪೊಲೀಸರು ಆರೋಪಿಗಳ ದೇಹದ ಪ್ರಮುಖ ಅಂಗಾಂಗಗಳಿಗೆ ಶೂಟ್ ಮಾಡಿದ್ದು ಯಾಕೆ?

ಪಿಯುಸಿಎಲ್ ಸಂಸ್ಥೆ ಪೊಲೀಸರ ಈ ಕೃತ್ಯವನ್ನು ಯೋಜಿತ ಕೊಲೆ ಎಂದು ಕರೆದಿದ್ದು, ಎನ್‍ಕೌಂಟರ್ ನಡೆಸಿದ ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲು ಮಾಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟಿದೆ. ಅಲ್ಲದೇ ನ್ಯಾಯಾಂಗ ತನಿಖೆಗೆ ಆಗ್ರಹಿಸಿದೆ.

ಪೊಲೀಸರ ವಶಕ್ಕೆ ನೀಡಲಾದ ಆರೋಪಿಗಳು ಅವರ ಕೈಯಲ್ಲೇ ಸುರಕ್ಷಿತರಾಗಿಲ್ಲದಿದ್ದರೆ ಅಕ್ರಮವಾಗಿ ಬಂಧಿಸಿರವರನ್ನು ಬಿಟ್ಟುಬಿಡಿ ಎಂದು ಸಂಸ್ಥೆ ತನ್ನ ಪ್ರಕಟನೆಯಲ್ಲಿ ಹೇಳಿದೆ. ಅಲ್ಲದೇ ಪೊಲೀಸರನ್ನು ವೈಭವೀಕರಸುತ್ತಿರುವುದುನ್ನು ನಿಲ್ಲಿಸುವಂತೆ ತಿಳಿಸಿದ್ದು, ಪೊಲೀಸರು ಯೋಜಿತ ಕೊಲೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಂಶಯ ವ್ಯಕ್ತ ಪಡಿಸಿದೆ.

Vishwa News 24

Recent Posts

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು – vishwanews24

ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ ಬಿದ್ದು ದ್ವಿತೀಯ ಪಿಯುಸಿ ವಿದ್ಯಾರ್ಥಿ ಸಾವು ಹೆಬ್ರಿ: ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಏಣಿಯಿಂದ…

33 minutes ago

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ…

43 minutes ago

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು “ಪಿಲಿಕೋಲ” – vishwanews24

ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂ­ದಾಗಿ ಕರಾ­ವಳಿ ಜಿಲ್ಲೆ­ಗಳು ಮಾತ್ರವಲ್ಲದೇ ದೇಶ-ವಿದೇ­ಶ­ಗ­ಳ­ಲ್ಲಿಯೂ…

2 hours ago

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: SDPI ಖಂಡನೆ -vishwanews24

ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್‌ ಡಿ ಪಿ ಐ ಖಂಡನೆ…

3 hours ago

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂ. ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ – vishwanews24

ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…

3 hours ago

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ – vishwanews24

ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ  ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…

3 hours ago