ಅತ್ಯಾಚಾರಿಗಳ ತಲೆ ಕಡಿದು ತಂದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ಬಿಜೆಪಿ ಮುಖಂಡ!
ಮಧ್ಯಪ್ರದೇಶ : ಕಳೆದ ಜೂನ್ 28 ರಂದು ಮಂದ್ಸೋರ್ ನಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಸಂಜೀವ್ ಮಿಶ್ರಾ ಅತ್ಯಾಚಾರ ಆರೋಪಿಗಳ ತಲೆ ಕಡಿದು ತಂದವರಿಗೆ 5 ಲಕ್ಷ ರೂ. ನೀಡುವುದಾಗಿ ಘೋಷಿಸಿದ್ದಾರೆ.
8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ಸಂಬಂಧ ಎಸ್ ಐಟಿ ತನಿಖೆ ನಡೆಸುತ್ತಿದ್ದು, ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಈ ನಿಟ್ಟಿನಲ್ಲಿ ಕೋರ್ಟ್ ಆರೋಪಿಗಳಿಗೆ ಗರಿಷ್ಠ ಶಿಕ್ಷೆಯನ್ನು ನೀಡಬೇಕು. ಇಲ್ಲವಾದಲ್ಲಿ ಆರೋಪಿಗಳನ್ನು ತಲೆ ಕಡಿದು ಯಾರೇ ತಂದರೂ ಅವರಿಗೆ 5 ಲಕ್ಷ ರೂ ನೀಡುತ್ತೇನೆ ಎಂದು ಘೋಷಿಸಿದ್ದಾರೆ.
ಸದ್ಯ ಸಂಜೀವ್ ಮಿಶ್ರಾ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ವ್ಯಾಪಕ ಸದ್ದು ಮಾಡುತ್ತಿದೆ.
ಜಾಹಿರಾತು: vyshali Bar& Family Restaurant kaup:
prop: NAYESH P SHETTY: 9620427036
