Featured

ಅತ್ಯಾಚಾರ ಪ್ರಕರಣ : ಕಿರುತೆರೆ ನಟ ಆಶಿಶ್ ಕಪೂರ್ ಬಂಧನ – vishwanews24

ಅತ್ಯಾಚಾರ ಪ್ರಕರಣ : ಕಿರುತೆರೆ ನಟ  ಆಶಿಶ್ ಕಪೂರ್ ಬಂಧನ

ಕಿರುತೆರೆ ನಟ  ಆಶಿಶ್ ಕಪೂರ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್‌ನಲ್ಲಿ ಆಶಿಶ್ ತನ್ನನ್ನು ಶೌಚಾಲಯದಲ್ಲಿ ಅತ್ಯಾಚಾರ ಮಾಡಿದನೆಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಆಗಸ್ಟ್ ಎರಡನೇ ವಾರದಲ್ಲಿ ದೆಹಲಿಯಲ್ಲಿ ಒಂದು ಮನೆಯಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಮನೆಯ ಪಾರ್ಟಿಯಲ್ಲಿ ನಟ ವಾಶ್ ರೂಂನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಪುಣೆಯ ಆಶಿಶ್ ಕಪೂರ್ ಅವರನ್ನು ಬಂಧಿಸಿದ್ದಾರೆ.

ಸಂತ್ರಸ್ತೆ ಮತ್ತು ಆಶಿಶ್ ಕಪೂರ್ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಮ್ ಮೂಲಕ ಭೇಟಿಯಾದರು. ಇದಾದ ನಂತರ, ಈ ಪರಿಚಯ ಸ್ನೇಹಕ್ಕೆ ತಿರುಗಿತು. ನಂತರ, ಆಶಿಶ್ ಸಂತ್ರಸ್ತೆಯನ್ನು ಮನೆ ಪಾರ್ಟಿಗೆ ಆಹ್ವಾನಿಸಿದರು. ಈ ಪ್ರಕರಣದಲ್ಲಿ, ಪೊಲೀಸರು ಆಶಿಶ್ ಕಪೂರ್, ಅವರ ಸ್ನೇಹಿತ, ಸ್ನೇಹಿತನ ಪತ್ನಿ ಮತ್ತು ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತೆ ತನ್ನ ಮಾತುಗಳನ್ನು ಬದಲಾಯಿಸಿದಳು. ಆಶಿಶ್ ಕಪೂರ್ ಮಾತ್ರ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿದ್ದಾಳೆ. ಇಡೀ ಘಟನೆಯನ್ನು ತಾನು ರೆಕಾರ್ಡ್ ಮಾಡಿರುವುದಾಗಿ ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಆದರೆ, ಪೊಲೀಸರಿಗೆ ಯಾವುದೇ ವೀಡಿಯೊ ಸಿಕ್ಕಿಲ್ಲ.

ಆಶಿಶ್ ತಮ್ಮ ನಟನೆಯಿಂದ ಕಡಿಮೆ ಅವಧಿಯಲ್ಲಿ ಪ್ರೇಕ್ಷಕರ ಹೃದಯದಲ್ಲಿ ಸ್ಥಾನ ಗಳಿಸಿದ್ದಾರೆ. ಆಶಿಶ್ ಕಿರುತೆರೆಯಲ್ಲಿ ಹಾಗೂ ಸಿನಿಮಾದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಆಶಿಶ್ ಇಂಕಾರ್, ಕುರ್ಬನ್, ಟೇಬಲ್ ನಂ. 21 ಸೇರಿ ಇನ್ನೂ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ.

‘ಸಾತ್ ಫೇರೆ’ ಮತ್ತು ‘ದೇಖಾ ಏಕ್ ಖ್ಬಾವ್’ ನಂತಹ ಧಾರಾವಾಹಿಗಳ ಮೂಲಕ ಆಶಿಶ್ ಮನೆಮಾತಾದರು. 2016 ರಲ್ಲಿ ಆಶಿಶ್ ತನ್ನ ಸಹನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹಬ್ಬಿದ್ದವು. ಇಬ್ಬರೂ 4 ವರ್ಷಗಳ ಕಾಲ ಪರಸ್ಪರ ಡೇಟಿಂಗ್ ಮಾಡಿದರು. ಆದಾಗ್ಯೂ, ಆ ನಂತರ, ಅವರು ಬೇರ್ಪಟ್ಟರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

21 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

21 hours ago