ಬೆಂಗಳೂರು : ತನ್ನ ಸಹ ಕಲಾವಿದಯ ಮೇಲೆ ಅತ್ಯಾಚಾರ ಎಸೆಗಿರುವ ಆರೋಪದ ಮೇಲೆ ಇದೀಗ ಕಿರುತೆರೆ ನಟ ಮಡೇನೂರು ಮನು ವಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 3ನೇ ACMM ಕೋರ್ಟ್ ಆದೇಶ ಹೊರಡಿಸಿದೆ.
5 ದಿನಗಳ ಪೊಲಿಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು. ಮೆಡಿಕಲ್ ಟೆಸ್ಟ್ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್ಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.
ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು. ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…