ಲಕ್ನೋ: ಬಿಜೆಪಿ ಮುಖಂಡ ಮತ್ತು ಮಾಜಿ ಕೇಂದ್ರ ಸಚಿವ ಚಿನ್ಮಯಾನಂದ ಅವರ ವಿರುದ್ಧ ಅತ್ಯಾಚಾರ ಆರೋಪ ಮಾಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅತ್ಯಾಚಾರ ಆರೋಪದ ಮೂಲಕ ಕಾನೂನು ವಿದ್ಯಾರ್ಥಿನಿ ತನ್ನ ಸ್ನೇಹಿತರ ಜತೆ ಸೇರಿ ಚಿನ್ಮಯಾನಂದ್ ಅವರಿಂದ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ್ದಾರೆಂಬ ಆರೋಪದ ಮೇಲೆ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆಂದು ಹೇಳಲಾಗುತ್ತಿದೆ.
ಬುಧವಾರ ಬೆಳಗ್ಗೆ 23 ವರ್ಷದ ಕಾನೂನು ವಿದ್ಯಾರ್ಥಿನಿಯನ್ನು ಉತ್ತರಪ್ರದೇಶದ ಮನೆಯಲ್ಲಿ ಆಕೆಯನ್ನು ವಿಶೇಷ ತನಿಖಾ ತಂಡ ಬಂಧಿಸಿದ್ದು, ವಿದ್ಯಾರ್ಥಿನಿಯನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ಎಂದು ತಿಳಿದುಬಂದಿದೆ.
ಮನೆಯಿಂದ ಆಕೆಯ ಬಂಧಿಸಿದ ಎಸ್ಐಟಿ ಪೊಲೀಸರು, ನಂತರ ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ಮಾಡಿಸಿ ನಂತರ ಆಕೆಯನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಸ್ವಾಮಿ ಚಿನ್ಮಯಾನಂದ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿ ಕಾನೂನು ವಿದ್ಯಾರ್ಥಿನಿ ದೂರು ಆಧರಿಸಿ ಸ್ವಾಮಿ ಅವರನ್ನು ಪೊಲೀಸರು ಬಂಧಿಸಿದ್ದರು.
ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…
ಭಟ್ಕಳ: ಬೈಕಿಗೆ ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…
ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…
ಉಡುಪಿ : ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…
ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…
ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ : ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…