Featured

ಅತ್ಯುತ್ತಮ ವಿದೇಶಿ ಭಾಷೆ ಚಿತ್ರ ಹಾಗೂ ಹಾಡು- ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದ RRR – Vishwanews24

ಅತ್ಯುತ್ತಮ ವಿದೇಶಿ ಭಾಷೆ ಚಿತ್ರ ಹಾಗೂ ಹಾಡು- ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದ RRR

ಹೊಸದಿಲ್ಲಿ: ದೇಶಕ್ಕೇ ಪ್ರಥಮ ಬಾರಿಗೆ ಗೋಲ್ಡನ್‌ ಗ್ಲೋಬ್‌ ಪ್ರಶಸ್ತಿಯನ್ನು ಇತ್ತೀಚೆಗೆ ಪಡೆದುಕೊಂಡ ರಾಜಮೌಳಿ ಅವರ ಆರ್ ಆರ್‌ಆರ್‌ (RRR) ಚಲನಚಿತ್ರ ಇದೀಗ ಲಾಸ್‌ ಏಂಜಲಿಸ್‌ನ ಫೇರ್‌ಮೊಂಟ್‌ ಸೆಂಚುರಿ ಪ್ಲಾಝಾದಲ್ಲಿ ನಡೆದ ಸಮಾರಂಭದಲ್ಲಿ ಅತ್ಯುತ್ತಮ ವಿದೇಶಿ ಭಾಷೆ ಚಲನಚಿತ್ರಕ್ಕಾಗಿ ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ಗಳಿಸಿದರೆ ಚಿತ್ರದಲ್ಲಿ ಜೂನಿಯರ್‌ ಎನ್‌ಟಿಆರ್‌ ಮತ್ತು ರಾಮ್‌ಚರಣ್‌ ಅಭಿನಯದಲ್ಲಿ ಮೂಡಿ ಬಂದ ʼನಾಟು ನಾಟುʼ ಹಾಡಿಗೆ ಅತ್ಯುತ್ತಮ ಹಾಡು ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ ದೊರಕಿದೆ.

ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್‌ಗೆ ಆರ್‌ಆರ್‌ಆರ್‌ ಇತರ ಚಿತ್ರಗಳಾದ ʻಆಲ್‌ ಕ್ವೈಟ್‌ ಆನ್‌ ದಿ ವೆಸ್ಟರ್ನ್‌ ಫ್ರಂಟ್‌,ʼ ʼಆರ್ಜೆಂಟಿನಾ 1985,ʼ ʼಬಾರ್ಡೊ,ʼ ʼಫಾಲ್ಸ್‌ ಕ್ರಾನಿಕಲ್‌ ಆಫ್‌ ಎ ಹ್ಯಾಂಡ್‌ಫುಲ್‌ ಟ್ರುತ್‌ʼ ಇವುಗಳೆದುರು ಸ್ಪರ್ಧಿಸಿತ್ತು.

ಎಸ್‌ಎಸ್‌ ರಾಜಮೌಳಿ ಮತ್ತವರ ಪುತ್ರ ಎಸ್‌ ಎಸ್‌ ಕಾರ್ತಿಕೇಯ ಅವರು ವೇದಿಕೆಗೆ ತೆರಳಿ ಈ ಪ್ರಶಸ್ತಿ ಸ್ವೀಕರಿಸಿದರು. ಈ ಕುರಿತು 28ನೇ ಕ್ರಿಟಿಕ್ಸ್‌ ಚಾಯ್ಸ್‌ ಅವಾರ್ಡ್ಸ್‌ ಇದರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಕೂಡ ಟ್ವೀಟ್‌ ಮಾಡಿ RRR ತಂಡಕ್ಕೆ ಅಭಿನಂದನೆ ಸಲ್ಲಿಸಿದೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ –  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ – vishwanews24

ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ -  ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…

8 minutes ago

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ – vishwanews24

ಮಂಗಳೂರು: ಮನೆ ಮೇಲೆ ತಡೆಗೋಡೆ ಕುಸಿತ; ಇಬ್ಬರು ಮಕ್ಕಳು ಸೇರಿ ಮೂವರು ದುರ್ಮರಣ ಮಂಗಳೂರು: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ…

54 minutes ago

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

22 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

22 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

22 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 hours ago