Featured

ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ : ಮುಖ್ಯಮಂತ್ರಿ ಸಿದ್ದರಾಮಯ್ಯ – vishwanews24

ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ , ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ : ಮುಖ್ಯಮಂತ್ರಿ

ಬೆಳಗಾವಿ: ರಾಮ ಭಕ್ತರಾಗಿ ಅತ್ಯುತ್ತಮ‌ ಹಿಂದೂ ಆಗಿದ್ದ ಮಹಾತ್ಮ ಗಾಂಧಿಯನ್ನು BJP ಪರಿವಾರದ ಗೋಡ್ಸೆ ಹತ್ಯೆ ಮಾಡಿದ. ನಾವು ಮಹಾತ್ಮಗಾಂಧಿ ಅವರ ಹಿಂದೂತ್ವದಲ್ಲಿ ನಂಬಿಕೆ ಇಟ್ಟಿದ್ದೇವೆ. ಬಿಜೆಪಿ ಪರಿವಾರ ಗೋಡ್ಸೆಯ ಕೊಲೆಗಡುಕ ಸಿದ್ಧಾಂತವನ್ನು ಪಾಲಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಸುವರ್ಣಸೌಧದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.ಗಾಂಧಿಯವರು ಹಿಂದೂತ್ವದ ದ್ವೇಷಿಯಾಗಿರುವ, ಗಾಂಧಿ ತತ್ವದ ವಿರೋಧಿಯಾಗಿರುವ ಬಿಜೆಪಿ ಪರಿವಾರ ಸಂವಿಧಾನ ವಿರೋಧಿ-ಅಂಬೇಡ್ಕರ್ ದ್ವೇಷಿಯೂ ಆಗಿದೆ ಎಂದರು.

ನಾವು ಮಹಾತ್ಮಗಾಂಧಿಯವರ ವಿಚಾರಗಳನ್ನು ಮುಂದಿನ ಪೀಳಿಗೆಗೆ ಇನ್ನಷ್ಟು ಅರ್ಥಪೂರ್ಣವಾಗಿ ತಲುಪಿಸುವ, ಗಾಂಧಿಯವರ ಗ್ರಾಮ ಸ್ವರಾಜ್ಯದ ಕನಸನ್ನು ನನಸು ಮಾಡುವ ಗುರಿಯೊಂದಿಗೆ ಜೈ ಭಾಪು-ಜೈ ಭೀಮ್-ಜೈ ಸಂವಿಧಾನ ಅಭಿಯಾನಯನ್ನು ಮುನ್ನಡೆಸುತ್ತೇವೆ ಎಂದರು.

ನೂರು ವರ್ಷಗಳ ಹಿಂದೆ ಕರ್ನಾಟಕದಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿದ್ದು ಮಹಾತ್ಮಗಾಂಧಿ. ಆ ದಿನ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಈ ನೆಲದಲ್ಲಿ ಹೆಚ್ಚಿಸಿದರು ಎಂದು ಸ್ಮರಿಸಿದರು.

ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಂಸದೆ ಪ್ರಿಯಾಂಕ ಗಾಂಧಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್, ಉಪ ಅಧ್ಯಕ್ಷ ಲಮಾಣಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

19 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

19 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

20 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

21 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

21 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

22 hours ago