ಉಡುಪಿ : ಅದಾನಿ ಪವರ್ ಲಿಮಿಟೆಡ್ ಉಡುಪಿ, ಅದಾನಿ ಫೌಂಡೇಶನ್ನ ಸಹಯೋಗದಲ್ಲಿ ಸಿಎಸ್ಆರ್ ಕಾರ್ಯಕ್ರಮದ ಭಾಗವಾಗಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಉಪಕ್ರಮದ ಅಡಿಯಲ್ಲಿ ಪಡುಬಿದ್ರಿ ಗ್ರಾಪಂಗೆ 14 ಲಕ್ಷ ರೂ. ವೆಚ್ಚದಲ್ಲಿ ವಿಶೇಷವಾಗಿ ವಿನ್ಯಾಸ ಗೊಳಿಸಿದ ಕಸದ ಸಂಗ್ರಹಣಾ ವಾಹನವನ್ನು ಹಸ್ತಾಂತರಿಸಲಾಯಿತು.
ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ಅನುಕೂಲವಾಗುವ ಹೈಡ್ರಾಲಿಕ್ ಡೆಕ್ ಹೊಂದಿರುವ ಈ ವಾಹನದ ಕೀಲಿ ಯನ್ನು ಅದಾನಿ ಗ್ರೂಪ್ನ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಅವರಿಗೆ ಗ್ರಾಪಂ ಕಚೇರಿ ಆವರಣದಲ್ಲಿ ಅಧಿಕೃತವಾಗಿ ಹಸ್ತಾಂತರಿಸಿದರು.
ಇದನ್ನೂ ಓದಿ .. 👇👇
ಬಳಿಕ ಮಾತನಾಡಿದ ಕಿಶೋರ್ ಆಳ್ವ, ಉಡುಪಿ ತಾಪ ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಪಡುಬಿದ್ರೆ ಸಹಿತ ಏಳು ಗ್ರಾಪಂಗಳಿಗೆ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಮೀಸಲಾದ ವಿಶೇಷ ಸಿಎಸ್ಆರ್ ಅನುದಾನವನ್ನು ಅದಾನಿ ಗ್ರೂಪ್ ನೀಡಿರುವುದಾಗಿ ತಿಳಿಸಿದರು. ಜೊತೆಗೆ ಶಿಕ್ಷಣ, ಆರೋಗ್ಯ, ಗ್ರಾಮೀಣ ಕ್ರೀಡೆಗಳ ಉತ್ತೇಜನ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ಆದಾನಿ ಸಂಸ್ಥೆಯ ಸಿಎಸ್ಆರ್ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ ಎಂದರು.
ಈವರೆಗೆ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಅದಾನಿ ಫೌಂಡೇಶನ್ ವತಿಯಿಂದ 1.92 ಕೋಟಿ ರೂ. ಮೊತ್ತದ ಸಿಎಸ್ಆರ್ ಅನುದಾನವನ್ನು ವೆಚ್ಚ ಮಾಡಲಾ ಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ .. 👇👇
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ, ಪಡುಬಿದ್ರಿ ಗ್ರಾಪಂ ಉಪಾಧ್ಯಕ್ಷ ಹೇಮಚಂದ್ರ ಹಾಗೂ ಸದಸ್ಯರಾದ ರವಿ ಶೆಟ್ಟಿ, ಜ್ಯೋತಿ ಮೆನನ್, ಸುನಂದಾ, ಮುಬೀನಾ, ಶೋಭಾ ಶೆಟ್ಟಿ, ಸಂದೇಶ್, ಅಶೋಕ್, ಹರೀಶ್ ಶೆಟ್ಟಿ, ನವೀನ್ ಶೆಟ್ಟಿ, ಸುಜಾತಾ ಆಚಾರ್ಯ, ಶಶಿ ಹಾಗೂ ನಿಯಾಝ್, ಅದಾನಿ ಪವರ್ ಲಿಮಿಟೆಡ್ ಉಡುಪಿ ತಾಪ ವಿದ್ಯುತ್ ಸ್ಥಾವರದ ಪರವಾಗಿ ಸಹಾಯಕ ಮಹಾಪ್ರಬಂಧಕ ರವಿ ಆರ್. ಜೇರೆ ಹಾಗೂ ಆದಾನಿ ಫೌಂಡೇಶನ್ನ ಅನುದೀಪ್ ಉಪಸ್ಥಿತರಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…