Featured

ಅದಾನಿ ಫೌಂಡೇಶನ್‌ನಿಂದ ಪಡುಬಿದ್ರಿ ಗ್ರಾಪಂಗೆ ಕಸ ನಿರ್ವಹಣಾ ವಾಹನ ಹಸ್ತಾಂತರ – vishwanews24

ಅದಾನಿ ಫೌಂಡೇಶನ್‌ನಿಂದ ಪಡುಬಿದ್ರಿ ಗ್ರಾಪಂಗೆ ಕಸ ನಿರ್ವಹಣಾ ವಾಹನ ಹಸ್ತಾಂತರ

ಉಡುಪಿ : ಅದಾನಿ ಪವರ್ ಲಿಮಿಟೆಡ್ ಉಡುಪಿ, ಅದಾನಿ ಫೌಂಡೇಶನ್‌ನ ಸಹಯೋಗದಲ್ಲಿ ಸಿಎಸ್‌ಆರ್ ಕಾರ್ಯಕ್ರಮದ ಭಾಗವಾಗಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಉಪಕ್ರಮದ ಅಡಿಯಲ್ಲಿ ಪಡುಬಿದ್ರಿ ಗ್ರಾಪಂಗೆ 14 ಲಕ್ಷ ರೂ. ವೆಚ್ಚದಲ್ಲಿ ವಿಶೇಷವಾಗಿ ವಿನ್ಯಾಸ ಗೊಳಿಸಿದ ಕಸದ ಸಂಗ್ರಹಣಾ ವಾಹನವನ್ನು ಹಸ್ತಾಂತರಿಸಲಾಯಿತು.

ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ಅನುಕೂಲವಾಗುವ ಹೈಡ್ರಾಲಿಕ್ ಡೆಕ್ ಹೊಂದಿರುವ ಈ ವಾಹನದ ಕೀಲಿ ಯನ್ನು ಅದಾನಿ ಗ್ರೂಪ್‌ನ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಅವರಿಗೆ ಗ್ರಾಪಂ ಕಚೇರಿ ಆವರಣದಲ್ಲಿ ಅಧಿಕೃತವಾಗಿ ಹಸ್ತಾಂತರಿಸಿದರು.

ಇದನ್ನೂ ಓದಿ .. 👇👇

ಬಳಿಕ ಮಾತನಾಡಿದ ಕಿಶೋರ್ ಆಳ್ವ, ಉಡುಪಿ ತಾಪ ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಪಡುಬಿದ್ರೆ ಸಹಿತ ಏಳು ಗ್ರಾಪಂಗಳಿಗೆ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಮೀಸಲಾದ ವಿಶೇಷ ಸಿಎಸ್‌ಆರ್ ಅನುದಾನವನ್ನು ಅದಾನಿ ಗ್ರೂಪ್ ನೀಡಿರುವುದಾಗಿ ತಿಳಿಸಿದರು. ಜೊತೆಗೆ ಶಿಕ್ಷಣ, ಆರೋಗ್ಯ, ಗ್ರಾಮೀಣ ಕ್ರೀಡೆಗಳ ಉತ್ತೇಜನ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ಆದಾನಿ ಸಂಸ್ಥೆಯ ಸಿಎಸ್‌ಆರ್ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ ಎಂದರು.

ಈವರೆಗೆ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಅದಾನಿ ಫೌಂಡೇಶನ್ ವತಿಯಿಂದ 1.92 ಕೋಟಿ ರೂ. ಮೊತ್ತದ ಸಿಎಸ್‌ಆರ್ ಅನುದಾನವನ್ನು ವೆಚ್ಚ ಮಾಡಲಾ ಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ .. 👇👇

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ, ಪಡುಬಿದ್ರಿ ಗ್ರಾಪಂ ಉಪಾಧ್ಯಕ್ಷ ಹೇಮಚಂದ್ರ ಹಾಗೂ ಸದಸ್ಯರಾದ ರವಿ ಶೆಟ್ಟಿ, ಜ್ಯೋತಿ ಮೆನನ್, ಸುನಂದಾ, ಮುಬೀನಾ, ಶೋಭಾ ಶೆಟ್ಟಿ, ಸಂದೇಶ್, ಅಶೋಕ್, ಹರೀಶ್ ಶೆಟ್ಟಿ, ನವೀನ್ ಶೆಟ್ಟಿ, ಸುಜಾತಾ ಆಚಾರ್ಯ, ಶಶಿ ಹಾಗೂ ನಿಯಾಝ್, ಅದಾನಿ ಪವರ್ ಲಿಮಿಟೆಡ್ ಉಡುಪಿ ತಾಪ ವಿದ್ಯುತ್ ಸ್ಥಾವರದ ಪರವಾಗಿ ಸಹಾಯಕ ಮಹಾಪ್ರಬಂಧಕ ರವಿ ಆರ್. ಜೇರೆ ಹಾಗೂ ಆದಾನಿ ಫೌಂಡೇಶನ್‌ನ ಅನುದೀಪ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

12 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

13 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

13 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

15 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

15 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

15 hours ago