ಉಡುಪಿ : ಅದಾನಿ ಪವರ್ ಲಿಮಿಟೆಡ್ ಉಡುಪಿ, ಅದಾನಿ ಫೌಂಡೇಶನ್ನ ಸಹಯೋಗದಲ್ಲಿ ಸಿಎಸ್ಆರ್ ಕಾರ್ಯಕ್ರಮದ ಭಾಗವಾಗಿ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಉಪಕ್ರಮದ ಅಡಿಯಲ್ಲಿ ಪಡುಬಿದ್ರಿ ಗ್ರಾಪಂಗೆ 14 ಲಕ್ಷ ರೂ. ವೆಚ್ಚದಲ್ಲಿ ವಿಶೇಷವಾಗಿ ವಿನ್ಯಾಸ ಗೊಳಿಸಿದ ಕಸದ ಸಂಗ್ರಹಣಾ ವಾಹನವನ್ನು ಹಸ್ತಾಂತರಿಸಲಾಯಿತು.
ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ಅನುಕೂಲವಾಗುವ ಹೈಡ್ರಾಲಿಕ್ ಡೆಕ್ ಹೊಂದಿರುವ ಈ ವಾಹನದ ಕೀಲಿ ಯನ್ನು ಅದಾನಿ ಗ್ರೂಪ್ನ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾಪಂ ಅಧ್ಯಕ್ಷೆ ಶಶಿಕಲಾ ಅವರಿಗೆ ಗ್ರಾಪಂ ಕಚೇರಿ ಆವರಣದಲ್ಲಿ ಅಧಿಕೃತವಾಗಿ ಹಸ್ತಾಂತರಿಸಿದರು.
ಇದನ್ನೂ ಓದಿ .. 👇👇
ಬಳಿಕ ಮಾತನಾಡಿದ ಕಿಶೋರ್ ಆಳ್ವ, ಉಡುಪಿ ತಾಪ ವಿದ್ಯುತ್ ಸ್ಥಾವರದ ಸುತ್ತಮುತ್ತಲಿನ ಪಡುಬಿದ್ರೆ ಸಹಿತ ಏಳು ಗ್ರಾಪಂಗಳಿಗೆ ಸಮುದಾಯ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಮೀಸಲಾದ ವಿಶೇಷ ಸಿಎಸ್ಆರ್ ಅನುದಾನವನ್ನು ಅದಾನಿ ಗ್ರೂಪ್ ನೀಡಿರುವುದಾಗಿ ತಿಳಿಸಿದರು. ಜೊತೆಗೆ ಶಿಕ್ಷಣ, ಆರೋಗ್ಯ, ಗ್ರಾಮೀಣ ಕ್ರೀಡೆಗಳ ಉತ್ತೇಜನ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲಿಯೂ ಆದಾನಿ ಸಂಸ್ಥೆಯ ಸಿಎಸ್ಆರ್ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ ಎಂದರು.
ಈವರೆಗೆ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಮೂಲ ಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಾತ್ರ ಅದಾನಿ ಫೌಂಡೇಶನ್ ವತಿಯಿಂದ 1.92 ಕೋಟಿ ರೂ. ಮೊತ್ತದ ಸಿಎಸ್ಆರ್ ಅನುದಾನವನ್ನು ವೆಚ್ಚ ಮಾಡಲಾ ಗಿದೆ ಎಂದು ಅವರು ತಿಳಿಸಿದರು.
ಇದನ್ನೂ ಓದಿ .. 👇👇
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಂಜುನಾಥ ಶೆಟ್ಟಿ, ಪಡುಬಿದ್ರಿ ಗ್ರಾಪಂ ಉಪಾಧ್ಯಕ್ಷ ಹೇಮಚಂದ್ರ ಹಾಗೂ ಸದಸ್ಯರಾದ ರವಿ ಶೆಟ್ಟಿ, ಜ್ಯೋತಿ ಮೆನನ್, ಸುನಂದಾ, ಮುಬೀನಾ, ಶೋಭಾ ಶೆಟ್ಟಿ, ಸಂದೇಶ್, ಅಶೋಕ್, ಹರೀಶ್ ಶೆಟ್ಟಿ, ನವೀನ್ ಶೆಟ್ಟಿ, ಸುಜಾತಾ ಆಚಾರ್ಯ, ಶಶಿ ಹಾಗೂ ನಿಯಾಝ್, ಅದಾನಿ ಪವರ್ ಲಿಮಿಟೆಡ್ ಉಡುಪಿ ತಾಪ ವಿದ್ಯುತ್ ಸ್ಥಾವರದ ಪರವಾಗಿ ಸಹಾಯಕ ಮಹಾಪ್ರಬಂಧಕ ರವಿ ಆರ್. ಜೇರೆ ಹಾಗೂ ಆದಾನಿ ಫೌಂಡೇಶನ್ನ ಅನುದೀಪ್ ಉಪಸ್ಥಿತರಿದ್ದರು.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…