Featured

ಅದಾನಿ ಸಮೂಹ ಷೇರು ಮೌಲ್ಯಗಳಲ್ಲಿ ಭಾರೀ ಕುಸಿತ ; ಎಲ್​​ಐಸಿಗೆ ಎರಡೇ ದಿನದಲ್ಲಿ 18,000 ಕೋಟಿ ನಷ್ಟ – Vishwanews24

ಅದಾನಿ ಸಮೂಹ ಷೇರು ಮೌಲ್ಯಗಳಲ್ಲಿ ಭಾರೀ ಕುಸಿತ ; ಎಲ್​​ಐಸಿಗೆ ಎರಡೇ ದಿನದಲ್ಲಿ 18,000 ಕೋಟಿ ನಷ್ಟ

ಮುಂಬೈ: ಅಮೆರಿಕದ ಸಂಶೋಧನಾ ಸಂಸ್ಥೆಯ ವರದಿ ಪರಿಣಾಮವಾಗಿ ಅದಾನಿ ಸಮೂಹದ ಷೇರು ಮೌಲ್ಯಗಳಲ್ಲಿ ಭಾರೀ ಕುಸಿತವಾಗಿರುವುದು ಭಾರತೀಯ ಜೀವ ವಿಮಾ ನಿಗಮ ಎಲ್​​ಐಸಿಗೂ ದೊಡ್ಡ ಹೊಡೆತ ನೀಡಿದೆ. ಅದಾನಿ ಸಮೂಹ ಸಂಸ್ಥೆಗಳಲ್ಲಿ ಎಲ್​ಐಸಿ ಕೂಡ ಹಣ ಹೂಡಿರುವುದರಿಂದ ಆ ಕಂಪನಿಯ ಷೇರು ಮೌಲ್ಯದಲ್ಲಿ ಕುಸಿತವಾಗಿರುವುದರ ಹೊಡೆತ ಎಲ್​ಐಸಿ ಮೇಲೂ ಬಿದ್ದಿದೆ. ಪರಿಣಾಮವಾಗಿ ಎರಡೇ ದಿನಗಳಲ್ಲಿ ಎಲ್​​ಐಸಿ 18,647 ಕೋಟಿ ರೂ. ಕಳೆದುಕೊಂಡಿದೆ. ಅದಾನಿ ಸಮೂಹದ ಕಂಪನಿಗಳಲ್ಲಿ ಎಲ್​ಐಸಿ ಹೂಡಿಕೆಯ ಮೌಲ್ಯ ಜನವರಿ 24ರ ವೇಳೆಗೆ 81,268 ಕೋಟಿ ರೂ. ಆಗಿತ್ತು. ಇದು ಜನವರಿ 27ಕ್ಕೆ 62,621 ಕೋಟಿ ರೂ.ಗೆ ಕುಸಿದಿದೆ.

ಅದಾನಿ ಗ್ರೀನ್ ಎನರ್ಜಿ, ಅದಾನಿ ಎಂಟರ್​ಪ್ರೈಸಸ್, ಅದಾನಿ ಪೋರ್ಟ್ಸ್, ಅದಾನಿ ಟೋಟಲ್ ಗ್ಯಾಸ್, ಅದಾನಿ ಟ್ರಾನ್ಸ್​​ಮಿಷನ್​ಗಳ ಶೇ 1ರಷ್ಟು ಷೇರು ಅನ್ನು ಎಲ್​ಐಸಿ ಹೊಂದಿದೆ ಎಂಬುದು ದತ್ತಾಂಶಗಳಿಂದ ತಿಳಿದುಬಂದಿದೆ. ಇತ್ತೀಚೆಗೆ ಅಂಬುಜಾ ಸಿಮೆಂಟ್ಸ್​​ ಮತ್ತು ಎಸಿಸಿಯಲ್ಲೂ ಹೂಡಿಕೆ ಮಾಡಿದೆ ಎಂದು ವರದಿಯಾಗಿದೆ. ಈ ಕಂಪನಿಗಳ ಷೇರುಗಳು ಕಳೆದ ಎರಡು ಟ್ರೇಡಿಂಗ್ ಸೆಷನ್​​ಗಳಲ್ಲಿ ಶೇ 27 ಹಾಗೂ ಶೇ 19ರ ನಡುವೆ ಕುಸಿದಿವೆ.

ಅಮೆರಿಕದ ಸಂಶೋಧನಾ ಸಂಸ್ಥೆ ಹಿಂಡನ್​ಬರ್ಗ್ ರಿಸರ್ಚ್​ ಲೆಕ್ಕಪತ್ರ ವಂಚನೆ ಮತ್ತು ಷೇರು ಬೆಲೆಯ ಮೇಲೆ ಪರಿಣಾಮ ಬೀರಿರುವ ಬಗ್ಗೆ ಅದಾನಿ ಸಮೂಹದ ಮೇಲೆ ಆರೋಪ ಮಾಡಿದ ಬೆನ್ನಲ್ಲೇ ಸಮೂಹದ ಷೇರುಗಳ ಮೌಲ್ಯದಲ್ಲಿ ಕುಸಿತ ಆರಂಭವಾಗಿತ್ತು.

ಮಿತಿಯಲ್ಲೇ ಸಾಲ ನೀಡಿದ್ದೇವೆ ಎಂದ ಎಸ್​ಬಿಐ
ಅದಾನಿ ಸಮೂಹ ಸಂಸ್ಥೆಗಳಿಗೆ ಸಾಲ ನೀಡಿರುವ ಎಸ್​​ಬಿಐ ಕೂಡ ಇತ್ತೀಚಿನ ಬೆಳವಣಿಗೆಯಿಂದಾಗಿ ನಷ್ಟದ ಭೀತಿಯಲ್ಲಿದೆ. ಎಸ್​​ಬಿಐ ಷೇರು ಮೌಲ್ಯದಲ್ಲಿಯೂ ಕಳೆದ ಎರಡು ದಿನಗಳ ವಹಿವಾಟಿನಲ್ಲಿ ಭಾರೀ ಕುಸಿತವಾಗಿದೆ. ಆದರೆ, ಆರ್​ಬಿಐ ಮಾನದಂಡದ ಪ್ರಕಾರ, ಇತಿಮಿತಿಯ ಒಳಗೇ ಅದಾನಿ ಸಮೂಹದ ಕಂಪನಿಗಳಿಗೆ ಸಾಲ ನೀಡಲಾಗಿದೆ ಎಂದು ಬ್ಯಾಂಕ್ ಹೇಳಿದೆ. ಯಾವುದೇ ಕಂಒನಿಗಳ ಸಮೂಹಕ್ಕೆ ಶೇ 25ಕ್ಕಿಂತ ಹೆಚ್ಚಿನ ಸಾಲ ನೀಡಲು ಆರ್​​ಬಿಐ ನಮಗೆ ಅನುಮತಿಸಿಲ್ಲ. ಆ ಮಿತಿಯ ಒಳಗೆಯೇ ನಾವು ಸಾಲ ನೀಡಿದ್ದೇವೆ ಎಂದು ಎಸ್​ಬಿಐ ಹೇಳಿದೆ.

ಎಸ್​​ಬಿಐ, ಎಲ್​ಐಸಿ ಷೇರು ಮೌಲ್ಯದಲ್ಲಿ ಕುಸಿತ
ಅದಾನಿ ಸಮೂಹದ ಕಂಪನಿಗಳ ಷೇರು ಮೌಲ್ಯದಲ್ಲಿ ಕುಸಿತವಾದ ಬೆನ್ನಲ್ಲೇ ಅದರ ಜತೆ ಸಂಬಂಧ ಹೊಂದಿರುವ ಎಲ್​ಐಸಿ ಹಾಗೂ ಎಸ್​ಬಿಐ ಷೇರು ಮೌಲ್ಯದಲ್ಲಿಯೂ ಕುಸಿತವಾಗಿದೆ. ಶುಕ್ರವಾರದ ವಹಿವಾಟಿನ ಅಂತ್ಯದ ವೇಳೆಗೆ ಎಸ್​ಬಿಐ ಷೇರು ಮೌಲ್ಯದಲ್ಲಿ ಶೇ 28.75ರಷ್ಟು ಕುಸಿತ ದಾಖಲಾಗಿತ್ತು. ಮತ್ತೊಂದೆಡೆ, ಎಲ್​ಐಸಿ ಷೇರು ಮೌಲ್ಯದಲ್ಲಿ ಶೇ 23.45ರಷ್ಟು ಕುಸಿತವಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

12 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago