Featured

ಅದು ತಾಜ್ ಮಹಲ್ ಅಲ್ಲ, ಶಿವ ದೇವಾಲಯ, ಅದು ಶಿವಮಂದಿರವಾಗಲು ಅದನ್ನು ಕೆಡವಿ ಹಾಕಿ: ಅಜಂ ಖಾನ್ ಹೇಳಿಕೆ..

ತಾಜ್ ಮಹಲ್ ವಿಶ್ವ ಪ್ರಸಿದ್ಧವಾದ ಸ್ಮಾರಕ. ದೇಶ ವಿದೇಶಗಳಿಂದ ಲಕ್ಷಾಂತರ ಜನ ಪ್ರವಾಸಿಗರನ್ನು ಆಕರ್ಷಿಸುವ ತಾಣ ತಾಜ್ ಮಹಲ್. ಆಗ್ರಾದಲ್ಲಿರುವ ತಾಜ್ ಮಹಲ್ ನ ಇತಿಹಾಸದ ಕುರಿತು ಹಲವಾರು ವರ್ಷಗಳಿಂದ ವಿವಾದಗಳಿವೆ. ಕೆಲವರು ಅದನ್ನು ಮಮತಾಜ್ ಗಾಗಿ ಶಹಜಹಾನ್ ಕಟ್ಟಿಸಿದ್ದ ಎಂದರೆ ಇನ್ನು ಕೆಲವರು ಅದು ಹಿಂದೂ ದೇವಾಲಯವಾಗಿತ್ತು ಎಂದು ವಾದಿಸುತ್ತಾರೆ. ತಾಜ್ ಮಹಲ್ ಒಂದು ಶಿವ ದೇವಾಲಯವಾಗಿತ್ತು, ಅದನ್ನು ಆನಂತರ ತಾಜ್ ಮಹಲ್ ನ್ನಾಗಿ ಶಹಜಹಾನ್ ಬದಲಾಯಿಸಿದ್ದಾನೆ ಎಂದು ಹಲವಾರು ಇತಿಹಾಸಕಾರರು ವಾದಿಸುತ್ತಾರೆ. ಈಗಲೂ ತಾಜ್ ಮಹಲ್ ನ ಇತಿಹಾಸದ ಕುರಿತಾಗಿ ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಹಾಗಾಗಿ ತಾಜ್ ಮಹಲ್ ಕುರಿತು ಅನೇಕರು ಆಗಾಗ್ಗೆ ಹೇಳುವ ಹೇಳಿಕೆಗಳು ಸುದ್ದಿಯಾಗಿ ತಾಜ್ ಮಹಲ್ ನ ಇತಿಹಾಸದ ಕುರಿತು ಮತ್ತಷ್ಟು ಕುತೂಹಲ ಮೂಡುವಂತೆ ಮಾಡುತ್ತದೆ.

ಇದೀಗ ಸಮಾಜವಾದಿ ಪಕ್ಷದ ಅಜಂ ಖಾನ್ ನೀಡಿರುವ ಹೇಳಿಕೆ ಕೂಡ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ತಾಜ್ ಮಹಲ್ ಒಂದು ಶಿವದೇವಾಲಯ. ಅದನ್ನು ಕೆಡವಿ ಹಾಕಿ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ತಾಜ್ ಮಹಲ್ ಅನ್ನು ಕೆಡವಿ ಹಾಕಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಸೂಚಿಸಿದ್ದಾರೆ. ಜೊತೆಗೆ ಯೋಗಿ ಆದಿತ್ಯನಾಥ್ ಏನಾದರೂ ತಾಜ್ ಮಹಲ್ ಅನ್ನು ಕೆಡವಲು ಮುಂದಾದರೆ ಅವರಿಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.

ತಾಜ್ ಮಹಲ್ ಅನ್ನು ನಾಶ ಮಾಡಲೇಬೇಕು. ಈ ವಿಷಯದಲ್ಲಿ ಯೋಗಿ ಆದಿತ್ಯನಾಥ್ ರವರಿಗೆ ನಾನು ಹೆಗಲಿಗೆ ಹೆಗಲು ಕೊಟ್ಟು ಸಾಗುತ್ತೇನೆ. ಯೋಗಿ ಆದಿತ್ಯನಾಥ್ ಅವರು ತಾಜ್ ಮಹಲ್ ನ್ನು ಶಿವ ಮಂದಿರ ಎಂಬ ಬಗ್ಗೆ ಹೇಳಿಕೆ ನೀಡಿದ್ದನ್ನು ಉಲ್ಲೇಖಿಸಿದ್ದಾರೆ. “ತಾಜ್ ಮಹಲ್ ನ್ನು ಶಿವ ಮಂದಿರ ಎನ್ನಲಾಗುತ್ತಿದೆ. ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿ ಮುಂದಾಳತ್ವ ವಹಿಸಿದರೆ ನಾನೂ ಅವರೊಂದಿಗೆ ತೆರಳಿ ತಾಜ್ ಮಹಲ್ ನ್ನು ಧ್ವಂಸ ಮಾಡುವ ಕೆಲಸದಲ್ಲಿ ಜೊತೆಯಾಗುತ್ತೇನೆ,  ಶಿವ ಮಂದಿರ ಶಿವಮಂದಿರವಾಗಲು ನಾನು ಮುಸ್ಲಿಮನಾಗಿದ್ದರೂ 20,000 ಕ್ಕೂ ಅಧಿಕ ಮುಸ್ಲಿಮರನ್ನು ಕರೆದುಕೊಂಡು ಬರುತ್ತೇನೆ ಎಂದಿದ್ದಾರೆ. ಕಳೆದ ಅಕ್ಟೋಬರ್ ನಲ್ಲಿ ಅಜಂ ಖಾನ್ ತಾಜ್ ಮಹಲ್ ಅನ್ನು ಗುಲಾಮಗಿರಿಯ ಸಂಕೇತ ಎಂದು ಬಣ್ಣಿಸಿದ್ದರು.

ತಾಜ್ ಮಹಲ್ ನ್ನು ಧ್ವಂಸ ಮಾಡುವುದಕ್ಕೆ ಮೊದಲ ಹೊಡೆತ ಯೋಗಿ ಆದಿತ್ಯನಾಥ್ ಅವರದ್ದಾಗಿರಬೇಕು, ಎರಡನೆಯದ್ದು ನನ್ನದಾಗಿರುತ್ತದೆ, ತಾಜ್ ಮಹಲ್ ನ್ನು ಧ್ವಂಸ ಮಾಡಬೇಕು ಎಂದು ಆಜಂ ಖಾನ್ ಮಾಧ್ಯಮಗಳಿಗೆ ಹೇಳಿದ್ದಾರೆ.
Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

2 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

2 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

22 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago