ರಾಜ್ಯ ನ್ಯೂಸ್

ಅಧಿಕಾರಕ್ಕೆ ಬಂದ ಬಳಿಕ ಗೋ ಹತ್ಯೆ ನಿಷೇಧ ಕಾನೂನು-ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸುವ ಕಾನೂನು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟುವ ಕಾನೂನು ತರುವ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಗೋಹತ್ಯೆ ಹೆಚ್ಚಾಗುತ್ತಿದ್ದು, ಗೋ ಹತ್ಯೆ ಸಂಪೂರ್ಣ ನಿಲ್ಲಬೇಕು. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಗೋ ಹತ್ಯೆ ನಿಷೇಧಕ್ಕೆ ಪ್ರಜಾಪ್ರಭುತ್ವದಡಿಯಲ್ಲಿ ಬಿಲ್ ಪಾಸ್ ಮಾಡಿದ್ದು, ಅಂದಿನ ರಾಜ್ಯಪಾಲರಾದ ಭಾರದ್ವಾಜ್ ರವರು ಇದಕ್ಕೆ ಅಡ್ಡಿಬಂದು ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ಇದರಿಂದಾಗಿ ಈ ಕಾನೂನು ಜಾರಿಗೆ ಅಡ್ಡಿಯುಂಟಾಯಿತು ಎಂದರು.

ದೇಶದ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಆ ರಾಜ್ಯಗಳಲ್ಲಿನ ಕಾನೂನುಗಳನ್ನು ತರಿಸಿಕೊಂಡು ತಜ್ಞರೊಂದಿಗೆ ಚರ್ಚಿಸಿ ರಾಜ್ಯದಲ್ಲೂ ಕಾನೂನು ಜಾರಿಗೆ ಪ್ರಯತ್ನ ಮಾಡಲಾಗುವುದು ಹಾಗೂ ರಾಜ್ಯದಲ್ಲಿ ಎಲ್ಲೆಲ್ಲಿ ಅಕ್ರಮ ಕಸಾಯಿಖಾನೆಗಳಿವೆಯೋ ಅವುಗಳಿಗೆ ಬೀಗ ಹಾಕಿಸಲಾಗುವುದು ಎಂದರು.

ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟಲು ಹಲವು ರಾಜ್ಯಗಳಲ್ಲಿ ಕಠಿಣ ಕಾನೂನು ಜಾರಿಯಲ್ಲಿದೆ. ಆ ರಾಜ್ಯಗಳಲ್ಲಿನ ಕಾನೂನುಗಳನ್ನು ತರಿಸಿಕೊಂಡು ರಾಜ್ಯದಲ್ಲೂ ಸಹ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡುತ್ತೇನೆ ಎಂದು ತಿಳಿಸಿದರು.

ಗೋ ಮೂತ್ರದ ಬಗ್ಗೆ ಗೊತ್ತೇ ಎಂಬ ನಟ ಪ್ರಕಾಶ್ ರೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಾಮಚಂದ್ರಾಪುರ ಮಠಕ್ಕೆ ಬಂದರೆ ಗೋ ಮೂತ್ರ, ಗೋವಿನ ಸಗಣಿಯ ಮಹತ್ವ ಏನೆಂಬುದರ ಕುರಿತು ತಿಳಿಸಿ ಹೇಳುವ ಕಾರ್ಯ ಮಾಡುತ್ತೇವೆ. ಅದು ಬಿಟ್ಟು ಭಂಡತನದ ಹೇಳಿಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಜನರೇ ತೀರ್ಮಾನಿಸುತ್ತಾರೆ ಎಂದರು.

ಬಿಜೆಪಿ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಟಿಕೆಟ್ ಸಿಗದವರು ಆತುರದ ನಿರ್ಧಾರ ಕೈಗೊಳ್ಳಬಾರದು. ಅತೃಪ್ತರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈಗಾಗಲೇ ದೇಶದ 21 ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಹಾಗೂ ಮೈತ್ರಿಕೂಟ ಸರ್ಕಾರ ಅಧಿಕಾರದಲ್ಲಿದ್ದು, 22ನೇ ರಾಜ್ಯವಾಗಿ ಕರ್ನಾ ಟಕದಲ್ಲೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಸಿದ್ಧರಾಮಯ್ಯ ಆಗುತ್ತೆ ಅನ್ನುವುದು ಆಗುವುದಿಲ್ಲ. ಆಗುವುದಿಲ್ಲ ಎನ್ನುವುದು ಆಗುತ್ತದೆ. ಹಾಗಾಗಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.

 

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

4 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago