ರಾಜ್ಯ ನ್ಯೂಸ್

ಅಧಿಕಾರಕ್ಕೆ ಬಂದ ಬಳಿಕ ಗೋ ಹತ್ಯೆ ನಿಷೇಧ ಕಾನೂನು-ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ

ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸುವ ಕಾನೂನು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರಗಳನ್ನು ತಡೆಗಟ್ಟುವ ಕಾನೂನು ತರುವ ಪ್ರಯತ್ನ ನಡೆಸುವುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಗೋಹತ್ಯೆ ಹೆಚ್ಚಾಗುತ್ತಿದ್ದು, ಗೋ ಹತ್ಯೆ ಸಂಪೂರ್ಣ ನಿಲ್ಲಬೇಕು. ಈ ಹಿಂದೆ ಬಿಜೆಪಿ ಸರ್ಕಾರ ಇದ್ದಾಗ ಗೋ ಹತ್ಯೆ ನಿಷೇಧಕ್ಕೆ ಪ್ರಜಾಪ್ರಭುತ್ವದಡಿಯಲ್ಲಿ ಬಿಲ್ ಪಾಸ್ ಮಾಡಿದ್ದು, ಅಂದಿನ ರಾಜ್ಯಪಾಲರಾದ ಭಾರದ್ವಾಜ್ ರವರು ಇದಕ್ಕೆ ಅಡ್ಡಿಬಂದು ರಾಷ್ಟ್ರಪತಿಗಳಿಗೆ ಕಳುಹಿಸಿದ್ದರು. ಇದರಿಂದಾಗಿ ಈ ಕಾನೂನು ಜಾರಿಗೆ ಅಡ್ಡಿಯುಂಟಾಯಿತು ಎಂದರು.

ದೇಶದ ಹಲವು ರಾಜ್ಯಗಳಲ್ಲಿ ಗೋಹತ್ಯೆ ನಿಷೇಧ ಜಾರಿಯಲ್ಲಿದೆ. ಆ ರಾಜ್ಯಗಳಲ್ಲಿನ ಕಾನೂನುಗಳನ್ನು ತರಿಸಿಕೊಂಡು ತಜ್ಞರೊಂದಿಗೆ ಚರ್ಚಿಸಿ ರಾಜ್ಯದಲ್ಲೂ ಕಾನೂನು ಜಾರಿಗೆ ಪ್ರಯತ್ನ ಮಾಡಲಾಗುವುದು ಹಾಗೂ ರಾಜ್ಯದಲ್ಲಿ ಎಲ್ಲೆಲ್ಲಿ ಅಕ್ರಮ ಕಸಾಯಿಖಾನೆಗಳಿವೆಯೋ ಅವುಗಳಿಗೆ ಬೀಗ ಹಾಕಿಸಲಾಗುವುದು ಎಂದರು.

ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ತಡೆಗಟ್ಟಲು ಹಲವು ರಾಜ್ಯಗಳಲ್ಲಿ ಕಠಿಣ ಕಾನೂನು ಜಾರಿಯಲ್ಲಿದೆ. ಆ ರಾಜ್ಯಗಳಲ್ಲಿನ ಕಾನೂನುಗಳನ್ನು ತರಿಸಿಕೊಂಡು ರಾಜ್ಯದಲ್ಲೂ ಸಹ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡುತ್ತೇನೆ ಎಂದು ತಿಳಿಸಿದರು.

ಗೋ ಮೂತ್ರದ ಬಗ್ಗೆ ಗೊತ್ತೇ ಎಂಬ ನಟ ಪ್ರಕಾಶ್ ರೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ರಾಮಚಂದ್ರಾಪುರ ಮಠಕ್ಕೆ ಬಂದರೆ ಗೋ ಮೂತ್ರ, ಗೋವಿನ ಸಗಣಿಯ ಮಹತ್ವ ಏನೆಂಬುದರ ಕುರಿತು ತಿಳಿಸಿ ಹೇಳುವ ಕಾರ್ಯ ಮಾಡುತ್ತೇವೆ. ಅದು ಬಿಟ್ಟು ಭಂಡತನದ ಹೇಳಿಕೆಗಳಿಗೆ ಉತ್ತರಿಸುವ ಅಗತ್ಯವಿಲ್ಲ. ಜನರೇ ತೀರ್ಮಾನಿಸುತ್ತಾರೆ ಎಂದರು.

ಬಿಜೆಪಿ 72 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಟಿಕೆಟ್ ಸಿಗದವರು ಆತುರದ ನಿರ್ಧಾರ ಕೈಗೊಳ್ಳಬಾರದು. ಅತೃಪ್ತರೊಂದಿಗೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈಗಾಗಲೇ ದೇಶದ 21 ರಾಜ್ಯದಲ್ಲಿ ಕಾಂಗ್ರೆಸ್ ನಿರ್ನಾಮವಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಹಾಗೂ ಮೈತ್ರಿಕೂಟ ಸರ್ಕಾರ ಅಧಿಕಾರದಲ್ಲಿದ್ದು, 22ನೇ ರಾಜ್ಯವಾಗಿ ಕರ್ನಾ ಟಕದಲ್ಲೂ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿಯಾಗುವುದಿಲ್ಲ ಎಂದು ಹೇಳಿದ್ದರು. ಸಿದ್ಧರಾಮಯ್ಯ ಆಗುತ್ತೆ ಅನ್ನುವುದು ಆಗುವುದಿಲ್ಲ. ಆಗುವುದಿಲ್ಲ ಎನ್ನುವುದು ಆಗುತ್ತದೆ. ಹಾಗಾಗಿ ಬಿ.ಎಸ್.ಯಡಿಯೂರಪ್ಪ ಅವರು ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.

 

Vishwa News 24

Recent Posts

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ – vishwanews24

ಕೋಳಿ ಫಾರ್ಮ್‌ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…

2 hours ago

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ – vishwanews24

ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…

2 hours ago

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ – vishwanews24

ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…

2 hours ago

ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…

3 hours ago

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ – vishwanews24

ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…

2 days ago

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ – vishwanews24

ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್‌ ಬೀದರ್‌: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…

2 days ago