Featured

ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ರಕ್ತ ಹೀರುವ ತಿಗಣೆಯಂತೆ ವರ್ತಿಸುತ್ತಿದೆ : ಪ್ರಿಯಾಂಕ್‌ ಖರ್ಗೆ -Vishwanews24

ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ರಕ್ತ ಹೀರುವ ತಿಗಣೆಯಂತೆ ವರ್ತಿಸುತ್ತಿದೆ : ಪ್ರಿಯಾಂಕ್‌ ಖರ್ಗೆ

ಬಿಜೆಪಿ ಏಳು ವರ್ಷಗಳಿಂದ ಜನರ ಜೇಬಿಗೆ ಕತ್ತರಿ ಹಾಕುವುದನ್ನೇ ತನ್ನ ಕಾರ್ಯವನ್ನಾಗಿಸಿದೆ..

ಕಲಬುರ್ಗಿ : “ದೇಶದ ಜನತೆಗೆ ಅಚ್ಛೆ ದಿನ್‌ ಭರವಸೆ ನೀಡುತ್ತಾ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಿಜೆಪಿ ಕಳೆದ ಏಳು ವರ್ಷಗಳಿಂದ ಜನರ ಜೇಬಿಗೆ ಕತ್ತರಿ ಹಾಕುವುದನ್ನೇ ತನ್ನ ಕಾರ್ಯವನ್ನಾಗಿಸಿದೆ” ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, “ತಮ್ಮ ಉದ್ಯಮಿ ಮಿತ್ರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಭ ಮಾಡಿಕೊಡುವ ಸಲುವಾಗಿ ಸಾಲ ಮನ್ನಾ ಮಾಡಲು ಜನಸಾಮಾನ್ಯರ ಮೇಲೆ ತೆರಿಗೆ ಭಾರವನ್ನು ಹೊರಿಸಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಅಡುಗೆ ಅನಿಲ‌ ಬೆಲೆ 410 ರೂ.ನಿಂದ 885 ರೂ. ಗೆ, ಪೆಟ್ರೋಲ್‌ ಬೆಲೆ 71 ರೂ.ನಿಂದ 105 ರೂ.ಗೆ, ಡೀಸೆಲ್‌ ಬೆಲೆ 57 ರೂ.ನಿಂದ 95 ರೂ. ಗೆ ಹೆಚ್ಚಳವಾಗಿದೆ” ಎಂದು ತಿಳಿಸಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಒಂದು ಬ್ಯಾರೆಲ್‌ಗೆ 145 ಡಾಲರ್‌ ಇದ್ದ ಸಂದರ್ಭ ಅಂದಿನ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌‌ ಬೆಲೆಯನ್ನು 60 ರೂ.ನಿಂದ 70 ರೂ.ಗೆ ನಿಗದಿಪಡಿಸಿತ್ತು. ಸದ್ಯ ಕಚ್ಚಾ ತೈಲದ ಬೆಲೆ ಒಂದು ಬ್ಯಾರಲ್‌ಗೆ 70 ಡಾಲರ್‌ಗೆ ಇಳಿಕೆಯಾಗಿದ್ದರೂ ಕೂಡಾ ಬಿಜೆಪಿ ಪೆಟ್ರೋಲ್‌ ಬೆಲೆಯನ್ನು ಶತಕದ ಗಡಿ ದಾಟಿಸಿದೆ” ಎಂದು ಲೇವಡಿ ಮಾಡಿದ್ದಾರೆ.

“ಪೆಟ್ರೋಲ್‌ ಬೆಲೆ ಹಾಗೂ ಡೀಸೆಲ್‌ ಬೆಲೆ ಮಾತ್ರವಲ್ಲದೇ ವಿದ್ಯುತ್‌ ಬೆಲೆಯನ್ನು ಕೂಡಾ ಕೇಂದ್ರ ಶೇ.30ರಷ್ಟು ಹೆಚ್ಚಿಸಿದೆ. ಖಾಲಿ ನಿವೇಶನ, ಮನೆ ಮೇಲಿನ ತೆರಿಗೆಯನ್ನು ಕೂಡಾ ಏರಿಕೆ ಮಾಡಿದೆ. ಕಬ್ಬಿಣದ ಬೆಲೆ ಪ್ರತಿ ಟನ್‌ಗೆ 30 ಸಾವಿರದಿಂದ 40 ಸಾವಿರದವರೆಗೆ ಹೆಚ್ಚಳ ಮಾಡಿದೆ” ಎಂದಿದ್ದಾರೆ.

“ಬಿಜೆಪಿ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಸ್ವರ್ಗವನ್ನೇ ಧರೆಗಿಳಿಸುವುದಾಗಿ ಜನಸಾಮಾನ್ಯರಿಗೆ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ಬಳಿಕ ರಕ್ತ ಹೀರಿವ ತಿಗಣೆಯಂತೆ ವರ್ತಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

14 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

14 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

14 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

15 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

16 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

16 hours ago