Featured

ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ರಕ್ತ ಹೀರುವ ತಿಗಣೆಯಂತೆ ವರ್ತಿಸುತ್ತಿದೆ : ಪ್ರಿಯಾಂಕ್‌ ಖರ್ಗೆ -Vishwanews24

ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ರಕ್ತ ಹೀರುವ ತಿಗಣೆಯಂತೆ ವರ್ತಿಸುತ್ತಿದೆ : ಪ್ರಿಯಾಂಕ್‌ ಖರ್ಗೆ

ಬಿಜೆಪಿ ಏಳು ವರ್ಷಗಳಿಂದ ಜನರ ಜೇಬಿಗೆ ಕತ್ತರಿ ಹಾಕುವುದನ್ನೇ ತನ್ನ ಕಾರ್ಯವನ್ನಾಗಿಸಿದೆ..

ಕಲಬುರ್ಗಿ : “ದೇಶದ ಜನತೆಗೆ ಅಚ್ಛೆ ದಿನ್‌ ಭರವಸೆ ನೀಡುತ್ತಾ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಿಜೆಪಿ ಕಳೆದ ಏಳು ವರ್ಷಗಳಿಂದ ಜನರ ಜೇಬಿಗೆ ಕತ್ತರಿ ಹಾಕುವುದನ್ನೇ ತನ್ನ ಕಾರ್ಯವನ್ನಾಗಿಸಿದೆ” ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, “ತಮ್ಮ ಉದ್ಯಮಿ ಮಿತ್ರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಭ ಮಾಡಿಕೊಡುವ ಸಲುವಾಗಿ ಸಾಲ ಮನ್ನಾ ಮಾಡಲು ಜನಸಾಮಾನ್ಯರ ಮೇಲೆ ತೆರಿಗೆ ಭಾರವನ್ನು ಹೊರಿಸಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಅಡುಗೆ ಅನಿಲ‌ ಬೆಲೆ 410 ರೂ.ನಿಂದ 885 ರೂ. ಗೆ, ಪೆಟ್ರೋಲ್‌ ಬೆಲೆ 71 ರೂ.ನಿಂದ 105 ರೂ.ಗೆ, ಡೀಸೆಲ್‌ ಬೆಲೆ 57 ರೂ.ನಿಂದ 95 ರೂ. ಗೆ ಹೆಚ್ಚಳವಾಗಿದೆ” ಎಂದು ತಿಳಿಸಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಒಂದು ಬ್ಯಾರೆಲ್‌ಗೆ 145 ಡಾಲರ್‌ ಇದ್ದ ಸಂದರ್ಭ ಅಂದಿನ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌‌ ಬೆಲೆಯನ್ನು 60 ರೂ.ನಿಂದ 70 ರೂ.ಗೆ ನಿಗದಿಪಡಿಸಿತ್ತು. ಸದ್ಯ ಕಚ್ಚಾ ತೈಲದ ಬೆಲೆ ಒಂದು ಬ್ಯಾರಲ್‌ಗೆ 70 ಡಾಲರ್‌ಗೆ ಇಳಿಕೆಯಾಗಿದ್ದರೂ ಕೂಡಾ ಬಿಜೆಪಿ ಪೆಟ್ರೋಲ್‌ ಬೆಲೆಯನ್ನು ಶತಕದ ಗಡಿ ದಾಟಿಸಿದೆ” ಎಂದು ಲೇವಡಿ ಮಾಡಿದ್ದಾರೆ.

“ಪೆಟ್ರೋಲ್‌ ಬೆಲೆ ಹಾಗೂ ಡೀಸೆಲ್‌ ಬೆಲೆ ಮಾತ್ರವಲ್ಲದೇ ವಿದ್ಯುತ್‌ ಬೆಲೆಯನ್ನು ಕೂಡಾ ಕೇಂದ್ರ ಶೇ.30ರಷ್ಟು ಹೆಚ್ಚಿಸಿದೆ. ಖಾಲಿ ನಿವೇಶನ, ಮನೆ ಮೇಲಿನ ತೆರಿಗೆಯನ್ನು ಕೂಡಾ ಏರಿಕೆ ಮಾಡಿದೆ. ಕಬ್ಬಿಣದ ಬೆಲೆ ಪ್ರತಿ ಟನ್‌ಗೆ 30 ಸಾವಿರದಿಂದ 40 ಸಾವಿರದವರೆಗೆ ಹೆಚ್ಚಳ ಮಾಡಿದೆ” ಎಂದಿದ್ದಾರೆ.

“ಬಿಜೆಪಿ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಸ್ವರ್ಗವನ್ನೇ ಧರೆಗಿಳಿಸುವುದಾಗಿ ಜನಸಾಮಾನ್ಯರಿಗೆ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ಬಳಿಕ ರಕ್ತ ಹೀರಿವ ತಿಗಣೆಯಂತೆ ವರ್ತಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago