Featured

ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ರಕ್ತ ಹೀರುವ ತಿಗಣೆಯಂತೆ ವರ್ತಿಸುತ್ತಿದೆ : ಪ್ರಿಯಾಂಕ್‌ ಖರ್ಗೆ -Vishwanews24

ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ರಕ್ತ ಹೀರುವ ತಿಗಣೆಯಂತೆ ವರ್ತಿಸುತ್ತಿದೆ : ಪ್ರಿಯಾಂಕ್‌ ಖರ್ಗೆ

ಬಿಜೆಪಿ ಏಳು ವರ್ಷಗಳಿಂದ ಜನರ ಜೇಬಿಗೆ ಕತ್ತರಿ ಹಾಕುವುದನ್ನೇ ತನ್ನ ಕಾರ್ಯವನ್ನಾಗಿಸಿದೆ..

ಕಲಬುರ್ಗಿ : “ದೇಶದ ಜನತೆಗೆ ಅಚ್ಛೆ ದಿನ್‌ ಭರವಸೆ ನೀಡುತ್ತಾ ಕೇಂದ್ರದಲ್ಲಿ ಅಧಿಕಾರ ಹಿಡಿದ ಬಿಜೆಪಿ ಕಳೆದ ಏಳು ವರ್ಷಗಳಿಂದ ಜನರ ಜೇಬಿಗೆ ಕತ್ತರಿ ಹಾಕುವುದನ್ನೇ ತನ್ನ ಕಾರ್ಯವನ್ನಾಗಿಸಿದೆ” ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು, “ತಮ್ಮ ಉದ್ಯಮಿ ಮಿತ್ರರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಲಾಭ ಮಾಡಿಕೊಡುವ ಸಲುವಾಗಿ ಸಾಲ ಮನ್ನಾ ಮಾಡಲು ಜನಸಾಮಾನ್ಯರ ಮೇಲೆ ತೆರಿಗೆ ಭಾರವನ್ನು ಹೊರಿಸಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಅಡುಗೆ ಅನಿಲ‌ ಬೆಲೆ 410 ರೂ.ನಿಂದ 885 ರೂ. ಗೆ, ಪೆಟ್ರೋಲ್‌ ಬೆಲೆ 71 ರೂ.ನಿಂದ 105 ರೂ.ಗೆ, ಡೀಸೆಲ್‌ ಬೆಲೆ 57 ರೂ.ನಿಂದ 95 ರೂ. ಗೆ ಹೆಚ್ಚಳವಾಗಿದೆ” ಎಂದು ತಿಳಿಸಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಒಂದು ಬ್ಯಾರೆಲ್‌ಗೆ 145 ಡಾಲರ್‌ ಇದ್ದ ಸಂದರ್ಭ ಅಂದಿನ ಕಾಂಗ್ರೆಸ್‌ ಸರ್ಕಾರ ಪೆಟ್ರೋಲ್‌‌ ಬೆಲೆಯನ್ನು 60 ರೂ.ನಿಂದ 70 ರೂ.ಗೆ ನಿಗದಿಪಡಿಸಿತ್ತು. ಸದ್ಯ ಕಚ್ಚಾ ತೈಲದ ಬೆಲೆ ಒಂದು ಬ್ಯಾರಲ್‌ಗೆ 70 ಡಾಲರ್‌ಗೆ ಇಳಿಕೆಯಾಗಿದ್ದರೂ ಕೂಡಾ ಬಿಜೆಪಿ ಪೆಟ್ರೋಲ್‌ ಬೆಲೆಯನ್ನು ಶತಕದ ಗಡಿ ದಾಟಿಸಿದೆ” ಎಂದು ಲೇವಡಿ ಮಾಡಿದ್ದಾರೆ.

“ಪೆಟ್ರೋಲ್‌ ಬೆಲೆ ಹಾಗೂ ಡೀಸೆಲ್‌ ಬೆಲೆ ಮಾತ್ರವಲ್ಲದೇ ವಿದ್ಯುತ್‌ ಬೆಲೆಯನ್ನು ಕೂಡಾ ಕೇಂದ್ರ ಶೇ.30ರಷ್ಟು ಹೆಚ್ಚಿಸಿದೆ. ಖಾಲಿ ನಿವೇಶನ, ಮನೆ ಮೇಲಿನ ತೆರಿಗೆಯನ್ನು ಕೂಡಾ ಏರಿಕೆ ಮಾಡಿದೆ. ಕಬ್ಬಿಣದ ಬೆಲೆ ಪ್ರತಿ ಟನ್‌ಗೆ 30 ಸಾವಿರದಿಂದ 40 ಸಾವಿರದವರೆಗೆ ಹೆಚ್ಚಳ ಮಾಡಿದೆ” ಎಂದಿದ್ದಾರೆ.

“ಬಿಜೆಪಿ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಸ್ವರ್ಗವನ್ನೇ ಧರೆಗಿಳಿಸುವುದಾಗಿ ಜನಸಾಮಾನ್ಯರಿಗೆ ಭರವಸೆ ನೀಡಿತ್ತು. ಆದರೆ, ಅಧಿಕಾರಕ್ಕೆ ಬಂದ ಬಳಿಕ ರಕ್ತ ಹೀರಿವ ತಿಗಣೆಯಂತೆ ವರ್ತಿಸುತ್ತಿದೆ” ಎಂದು ಕಿಡಿಕಾರಿದ್ದಾರೆ.

Vishwa News 24

Recent Posts

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

1 minute ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

23 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

1 day ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

1 day ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

1 day ago