ಮೈಸೂರು: ‘ಮೂರು ಶಾಪಗಳು ಹಾಗೂ ಅಧಿಕಾರದಲ್ಲಿದ್ದಾಗ ತೋರಿದ ದರ್ಪ, ಅಹಂಕಾರದಿಂದ ಕಾಂಗ್ರೆಸ್ ದೂಳೀಪಟವಾಗುತ್ತಿದೆ’ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಬೆಂಬಲಿತ ಸದಸ್ಯರನ್ನು ಸನ್ಮಾನಿಸಲು ಬಿಜೆಪಿ ಆಯೋಜಿಸಿರುವ ‘ಜನ ಸೇವಕ್’ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಗಾಂಧೀಜಿ ಹೆಸರು ಹೇಳಿಕೊಂಡು ಅಧಿಕಾರಕ್ಕೇರಿದ ಕಾಂಗ್ರೆಸ್ ಪಕ್ಷವು ಅವರ ವಿಚಾರಧಾರೆ, ಗ್ರಾಮ ಸ್ವರಾಜ್ಯವನ್ನು ಮರೆಯಿತು. ಮತ ಬೇಟೆಗಾಗಿ ಅಂಬೇಡ್ಕರ್ ಫೋಟೊ ಬಳಸುವ ಈ ಪಕ್ಷವು ಅವರು ಜೀವಂತವಾಗಿದ್ದಾಗ ಸರಿಯಾಗಿ ಗೌರವವನ್ನೇ ಕೊಡಲಿಲ್ಲ. ಹತ್ತಾರು ಚುನಾವಣೆಗಳಲ್ಲಿ ಗೋಮಾತೆಯ ಚಿಹ್ನೆ (ಹಸು ಹಾಗೂ ಕರು) ಅಡಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು. ಆದರೆ, ಅದನ್ನು ಮರೆತು ಹಸು ಹಂತಕರಿಗೆ ಮಣೆ ನೀಡಿತು. ಗೋಮಾಂಸ ತಿನ್ನುವ ಹೇಳಿಕೆ ನೀಡಿ ದೇಶದ ಸಂಸ್ಕೃತಿಗೆ ಅವಮಾನ ಮಾಡುತ್ತಿದೆ’ ಎಂದರು.
‘ಹೀಗಾಗಿ, ಗಾಂಧಿ, ಅಂಬೇಡ್ಕರ್ ಹಾಗೂ ಗೋಹತ್ಯೆ ಶಾಪ ಕಾಂಗ್ರೆಸ್ ಪಕ್ಷವನ್ನು ತಟ್ಟಿದೆ. ಈಗ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ಜಗಳ ನಡೆಯುತ್ತಿದೆ. ಸಿದ್ರಾಮಣ್ಣ ಟವೆಲ್ ಹಾಕಿದ್ದಾರೆ. ಅದನ್ನು ಎಳೆಯಲು ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ’ ಎಂದು ನುಡಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…