ಮೈಸೂರು: ‘ಮೂರು ಶಾಪಗಳು ಹಾಗೂ ಅಧಿಕಾರದಲ್ಲಿದ್ದಾಗ ತೋರಿದ ದರ್ಪ, ಅಹಂಕಾರದಿಂದ ಕಾಂಗ್ರೆಸ್ ದೂಳೀಪಟವಾಗುತ್ತಿದೆ’ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಬೆಂಬಲಿತ ಸದಸ್ಯರನ್ನು ಸನ್ಮಾನಿಸಲು ಬಿಜೆಪಿ ಆಯೋಜಿಸಿರುವ ‘ಜನ ಸೇವಕ್’ ಸಮಾವೇಶದಲ್ಲಿ ಅವರು ಮಾತನಾಡಿದರು.
‘ಗಾಂಧೀಜಿ ಹೆಸರು ಹೇಳಿಕೊಂಡು ಅಧಿಕಾರಕ್ಕೇರಿದ ಕಾಂಗ್ರೆಸ್ ಪಕ್ಷವು ಅವರ ವಿಚಾರಧಾರೆ, ಗ್ರಾಮ ಸ್ವರಾಜ್ಯವನ್ನು ಮರೆಯಿತು. ಮತ ಬೇಟೆಗಾಗಿ ಅಂಬೇಡ್ಕರ್ ಫೋಟೊ ಬಳಸುವ ಈ ಪಕ್ಷವು ಅವರು ಜೀವಂತವಾಗಿದ್ದಾಗ ಸರಿಯಾಗಿ ಗೌರವವನ್ನೇ ಕೊಡಲಿಲ್ಲ. ಹತ್ತಾರು ಚುನಾವಣೆಗಳಲ್ಲಿ ಗೋಮಾತೆಯ ಚಿಹ್ನೆ (ಹಸು ಹಾಗೂ ಕರು) ಅಡಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು. ಆದರೆ, ಅದನ್ನು ಮರೆತು ಹಸು ಹಂತಕರಿಗೆ ಮಣೆ ನೀಡಿತು. ಗೋಮಾಂಸ ತಿನ್ನುವ ಹೇಳಿಕೆ ನೀಡಿ ದೇಶದ ಸಂಸ್ಕೃತಿಗೆ ಅವಮಾನ ಮಾಡುತ್ತಿದೆ’ ಎಂದರು.
‘ಹೀಗಾಗಿ, ಗಾಂಧಿ, ಅಂಬೇಡ್ಕರ್ ಹಾಗೂ ಗೋಹತ್ಯೆ ಶಾಪ ಕಾಂಗ್ರೆಸ್ ಪಕ್ಷವನ್ನು ತಟ್ಟಿದೆ. ಈಗ ಕಾಂಗ್ರೆಸ್ನಲ್ಲಿ ನಾಯಕತ್ವಕ್ಕಾಗಿ ಜಗಳ ನಡೆಯುತ್ತಿದೆ. ಸಿದ್ರಾಮಣ್ಣ ಟವೆಲ್ ಹಾಕಿದ್ದಾರೆ. ಅದನ್ನು ಎಳೆಯಲು ಡಿ.ಕೆ.ಶಿವಕುಮಾರ್ ಪ್ರಯತ್ನಿಸುತ್ತಿದ್ದಾರೆ’ ಎಂದು ನುಡಿದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…