Featured

ಅಧಿಕಾರದ ಆಸೆ ಇಲ್ಲದ ನಾವುಗಳು ಗಾಂಧಿ ಪರಿವಾರದ ಜೊತೆಗೆ ಇದ್ದು ಪಕ್ಷವನ್ನು ಕಟ್ಟುತ್ತೇವೆ, ಬೆಳೆಸುತ್ತೇವೆ : ಡಿಕೆ ಶಿವಕುಮಾರ್

ಕಾಂಗ್ರೆಸ್ ಪಕ್ಷ ಉಳಿಯಲು, ದೇಶಾದ್ಯಂತ ಎಲ್ಲ ನಾಯಕರು ಒಗ್ಗಟ್ಟಿನಿಂದ ಇರಲು ಗಾಂಧಿ ಪರಿವಾರ ಬೇಕೇ ಬೇಕು..

ಗಾಂಧಿ ಪರಿವಾರ ಕಾಂಗ್ರೆಸ್ ಪಕ್ಷದ ಅತಿ ಪ್ರಮುಖ ಭಾಗ. ಅವರಿಲ್ಲದೆ ನಾವಿಲ್ಲ..

ಗಾಂಧಿ ಪರಿವಾರ ಇಲ್ಲದೆ ಕಾಂಗ್ರೆಸ್ ಪಕ್ಷದ ಉಳಿವು ಅಸಾಧ್ಯ

ನವದೆಹಲಿ: ಕಾಂಗ್ರೆಸ್ ಪಕ್ಷ ಉಳಿಯಲು, ದೇಶಾದ್ಯಂತ ಎಲ್ಲ ನಾಯಕರು ಒಗ್ಗಟ್ಟಿನಿಂದ ಇರಲು ಗಾಂಧಿ ಪರಿವಾರ ಬೇಕೇ ಬೇಕು. ಗಾಂಧಿ ಪರಿವಾರ ಕಾಂಗ್ರೆಸ್ ಪಕ್ಷದ ಅತಿ ಪ್ರಮುಖ ಭಾಗ. ಅವರಿಲ್ಲದೆ ನಾವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಡಿಕೆ ಶಿವಕುಮಾರ್, ಗಾಂಧಿ ಪರಿವಾರ ಇಲ್ಲದೆ ಕಾಂಗ್ರೆಸ್ ಪಕ್ಷದ ಉಳಿವು ಅಸಾಧ್ಯ ಎಂದು ಹೇಳುವ ಮೂಲಕ ಗಾಂಧಿ ಪರಿವಾರದ ವಿರೋಧಿಗಳ ವಿರುದ್ಧ ಚಾಟಿ ಬೀಸಿದ್ದಾರೆ.

ಅಧಿಕಾರದ ಆಸೆ ಇರುವವರು ಪಕ್ಷ ಬಿಟ್ಟು ಹೋಗಬಹುದು ಎಂದು ಸವಾಲೆಸೆದಿರುವ ಡಿ. ಕೆ. ಶಿವಕುಮಾರ್, ಅಧಿಕಾರದ ಆಸೆ ಇಲ್ಲದ ನಾವುಗಳು ಗಾಂಧಿ ಪರಿವಾರದ ಜೊತೆಗೆ ಇದ್ದು ಪಕ್ಷವನ್ನು ಕಟ್ಟುತ್ತೇವೆ, ಬೆಳೆಸುತ್ತೇವೆ ಎಂದು ಹೇಳಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಪಕ್ಷದಿಂದ ಹೊರಹೋಗುವವರ ಸಂಖ್ಯೆ ಹೆಚ್ಚುತ್ತಿರುವ ಕುರಿತು ಮಾತನಾಡಿರು ಅವರು, ‘ವೈಯಕ್ತಿಕ ಲಾಭ ನೋಡುವವರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ನಾವು ಕಾಂಗ್ರೆಸ್ ಪಕ್ಷ ಮತ್ತು ಕಾಂಗ್ರೆಸ್ ಸಿದ್ಧಾಂತಕ್ಕೆ ನಿಷ್ಠರಾಗಿದ್ದೇವೆ. ಗಾಂಧಿ ಕುಟುಂಬದೊಂದಿಗೆ ಯಾವಾಗಲೂ ನಿಲ್ಲುತ್ತೇವೆ‘ ಎಂದು ಅವರು ತಿಳಿಸಿದರು.

Vishwa News 24

Recent Posts

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

8 minutes ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

26 minutes ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

31 minutes ago

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ – ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ- vishwanews24

ಬೆಳ್ತಂಗಡಿ: ಭಾರೀ ಮಳೆಯ ಹಿನ್ನೆಲೆ - ಜು. 8ರಿಂದ ಗಡಾಯಿಕಲ್ಲು ಚಾರಣ ನಿಷೇಧ ಬೆಳ್ತಂಗಡಿ: ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ…

40 minutes ago

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ – vishwanews24

ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ: ಉಡುಪಿ ಜಿಲ್ಲಾ ಘಟಕ “ಪ್ರಭಾವಿ ಜಿಲ್ಲೆ” ಘೋಷಣೆ ಉಡುಪಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ…

53 minutes ago

ಸುಳ್ಯ : ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ – vishwanews24

ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ್ ವಿಧಿವಶ ಮಂಗಳೂರು: ಭಾರತದ ‘ಬ್ರಿಡ್ಜ್ ಮ್ಯಾನ್’ ಎಂದೇ ಖ್ಯಾತರಾಗಿದ್ದ, ನೂರಾರು ಗ್ರಾಮೀಣ…

1 hour ago