Featured

ಅಧಿಕಾರ ಇರಲಿ, ಇಲ್ಲದೆ ಇರಲಿ, ಜನರ ಸೇವೆ ಪೂರ್ವಜನ್ಮದ ಪುಣ್ಯದ ಕೆಲಸ : ಕಿಟ್ ವಿತರಿಸಿದ ಶಾಸಕ ಮುನಿರತ್ನ – Vishwanews24

ಅಧಿಕಾರ ಇರಲಿ, ಇಲ್ಲದೆ ಇರಲಿ, ಜನರ ಸೇವೆ ಪೂರ್ವಜನ್ಮದ ಪುಣ್ಯದ ಕೆಲಸ : ಕಿಟ್ ವಿತರಿಸಿದ ಶಾಸಕ ಮುನಿರತ್ನ – Vishwanews24

ಬೆಂಗಳೂರು: ಕೊರೊನಾದಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರ ನೆರವಿಗೆ ಮುಂದಾಗಿರುವ ಶಾಸಕ ಮುನಿರತ್ನ ಅವರು, ರಾಜರಾಜೇಶ್ವರಿ ನಗರದ ಎಲ್ಲಾ ವಾರ್ಡ್‍ನ ಜನರಿಗೆ ಉಚಿತ ದಿನಸಿ ಪದಾರ್ಥಗಳನ್ನು ಹಂಚುತ್ತಿದ್ದಾರೆ.

ಇಂದು ಕೊಟ್ಟಿಗೆಪಾಳ್ಯದಲ್ಲಿ ಜನರಿಗೆ ಉಚಿತ ದಿನಸಿ ಪದಾರ್ಥಗಳ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕರು, ತರಕಾರಿ ಹಾಗೂ ದಿನಸಿ ಪದಾರ್ಥಗಳನ್ನು ಒಳಗೊಂಡಿರುವ ಕಿಟ್‍ನ್ನು ನೂರಾರು ಜನರಿಗೆ ಹಂಚುವ ಮೂಲಕ ಕೊರೊನಾ ಕಷ್ಟಕಾಲದಲ್ಲಿ ಸಮಸ್ಯೆ ಎದುರಿಸುತ್ತಿರುವ ಜನರಿಗೆ ನೆರವಿನ ಹಸ್ತ ಚಾಚಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುನಿರತ್ನ ಅವರು, ಅಧಿಕಾರ ಶಾಶ್ವತವಲ್ಲ ಅಧಿಕಾರ ಇರಲಿ, ಇಲ್ಲದೆ ಇರಲಿ ಆ ಜನರ ಸೇವೆ ಮಾಡುವುದು ಪೂರ್ವಜನ್ಮದ ಪುಣ್ಯ ಆ ಕೆಲಸ ನಾನು ಮಾಡುತ್ತಿದ್ದೇನೆ. ಇಂತಹ ಕಷ್ಟ ಕಾಲದಲ್ಲಿ ಮತದಾರ ಬಂಧುಗಳಿಗೆ ಮೊದಲಿಗೆ ನೆನಪಿಗೆ ಬರುವುದು ರಾಜಕಾರಣಿಗಳು. ಆಯಾ ಕ್ಷೇತ್ರದಲ್ಲಿರುವ ಸಣ್ಣ ಮಟ್ಟಿನಿಂದ ಹಿಡಿದು ದೊಡ್ಡ ಮಟ್ಟದ ರಾಜಕಾರಣಿ ಅಂದರೆ ತಾಲೂಕು, ಜಿಲ್ಲೆ, ನಗರ ಪ್ರದೇಶದಲ್ಲಿರುವ ರಾಜಕಾರಣಿಗಳು ಅಥವಾ ಶಾಸಕರು, ಸಂಸದರು ಇರಬಹುದು. ಕಷ್ಟ ಎಂದು ಬಂದಾಗ ಸಾರ್ವಜನಿಕರು ಮೊದಲಿಗೆ ಅವರನ್ನು ನೆನಪಿಸಿಕೊಳ್ಳುತ್ತಾರೆ. ಆ ರಾಜಕಾರಣಿ ಆ ಸಂದರ್ಭದಲ್ಲಿ ಜನರಿಗೆ ನೆರವಿನ ಹಸ್ತ ಚಾಚಿಲ್ಲ ಅಂದರೆ ಅವರನ್ನು ದೇವರು ಕೂಡ ಮೆಚ್ಚುವುದಿಲ್ಲ ಎಂದರು.

ನನ್ನ ಕ್ಷೇತ್ರದಲ್ಲಿ ನನ್ನ ಮತದಾರರ ಸೇವೆ ಮಾಡುವಂತಹ ಭಾಗ್ಯ ಜನ ನನಗೆ ಕಲ್ಪಿಸಿಕೊಟ್ಟಿದ್ದಾರೆ. ಅವರ ಋಣದಲ್ಲಿ ನಾನು ಇದ್ದೇನೆ. ಅವರ ಋಣ ತೀರಿಸುವ ಕೆಲಸ ನಾನು ಮಾಡುತ್ತಾ ಇರುತ್ತೇನೆ. ಕೊರೊನಾ ಮೊದಲನೇ ಅಲೆಯಲ್ಲೂ ನಾನು ಸಹಾಯ ಮಾಡಿದ್ದೇನೆ. ಎರಡನೇ ಅಲೆಯಲ್ಲೂ ಮಾಡುತ್ತಿದ್ದೇನೆ. ಮೊದಲನೇ ಅಲೆಯ ಸಂದರ್ಭ ನಾನು ಶಾಸಕನಾಗದೆ ಇದ್ದರು ಜನರ ಸೇವೆ ಮಾಡಿದ್ದೇನೆ. ಇದೀಗ ಶಾಸಕನಾಗಿ ಕೂಡ ಜನರ ಸೇವೆ ಮುಂದಾಗಿದ್ದೇನೆ ಎಂದು ಅಭಿಪ್ರಾಯಪಟ್ಟರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

10 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

11 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

12 hours ago