ತಲಕಾವೇರಿ(ಕೊಡಗು): ಕೊಡಗು ಜಿಲ್ಲೆಯ ಜೀವನದಿ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ.
ತಲಕಾವೇರಿಗೆ ಮುಖ್ಯಮಂತ್ರಿ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇಲ್ಲಿ ಮೊದಲಿನಿಂದಲೂ ಇತ್ತು. ಈ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ನಾನು ಇಂತಹ ಮೂಢನಂಬಿಕೆಗಳನ್ನು ನಂಬುವುದಿಲ್ಲ. ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ ಎಂದರು.
ಭಾಗಮಂಡಲ, ತ್ರಿವೇಣಿ ಸಂಗಮಕ್ಕೆ ಆಗಮಿಸಿ ಭಂಗಂಡೇಶ್ವರ ದೇವರಿಗೆ ಸೇವೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡರು.
ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವರಾದ ಡಿ ಕೆ ಶಿವಕುಮಾರ್, ಸಾ.ರಾ. ಮಹೇಶ್ ಕೂಡ ಇದ್ದರು. ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ನಾಲ್ಕು ಜಲಾಶಯಗಳು ಭರ್ತಿಯಾಗಿದ್ದು ಬಾಗಿನ ಸಲ್ಲಿಸಲು ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿದರು.
ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿದ್ದಂತೆ ತಲಕಾವೇರಿಗೆ ಭೇಟಿ ನೀಡಿದರೆ ಕೂಡ ಮುಖ್ಯಮಂತ್ರಿಗಳು ಶೀಘ್ರವೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಹಿಂದಿನಿಂದಲೂ ಇದೆ.
ಈ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ . ಧರ್ಮ ಮತ್ತು ಸುಭಿಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ. .
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…