Featured

ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ : ತಲಕಾವೇರಿಯಲ್ಲಿ ಸಿಎಂ ಕುಮಾರಸ್ವಾಮಿ

ತಲಕಾವೇರಿ(ಕೊಡಗು): ಕೊಡಗು ಜಿಲ್ಲೆಯ ಜೀವನದಿ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ.

ತಲಕಾವೇರಿಗೆ ಮುಖ್ಯಮಂತ್ರಿ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇಲ್ಲಿ ಮೊದಲಿನಿಂದಲೂ ಇತ್ತು. ಈ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ನಾನು ಇಂತಹ ಮೂಢನಂಬಿಕೆಗಳನ್ನು ನಂಬುವುದಿಲ್ಲ. ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ ಎಂದರು.

ಭಾಗಮಂಡಲ, ತ್ರಿವೇಣಿ ಸಂಗಮಕ್ಕೆ ಆಗಮಿಸಿ ಭಂಗಂಡೇಶ್ವರ ದೇವರಿಗೆ ಸೇವೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡರು.

ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವರಾದ ಡಿ ಕೆ ಶಿವಕುಮಾರ್, ಸಾ.ರಾ. ಮಹೇಶ್ ಕೂಡ ಇದ್ದರು. ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ನಾಲ್ಕು ಜಲಾಶಯಗಳು ಭರ್ತಿಯಾಗಿದ್ದು ಬಾಗಿನ ಸಲ್ಲಿಸಲು ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿದರು.

ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿದ್ದಂತೆ ತಲಕಾವೇರಿಗೆ ಭೇಟಿ ನೀಡಿದರೆ ಕೂಡ ಮುಖ್ಯಮಂತ್ರಿಗಳು ಶೀಘ್ರವೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಹಿಂದಿನಿಂದಲೂ ಇದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ . ಧರ್ಮ ಮತ್ತು ಸುಭಿಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ. .

Vishwa News 24

Recent Posts

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

27 minutes ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

31 minutes ago

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

47 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

1 hour ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

21 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago