Featured

ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ : ತಲಕಾವೇರಿಯಲ್ಲಿ ಸಿಎಂ ಕುಮಾರಸ್ವಾಮಿ

ತಲಕಾವೇರಿ(ಕೊಡಗು): ಕೊಡಗು ಜಿಲ್ಲೆಯ ಜೀವನದಿ ಕಾವೇರಿ ಜನ್ಮಸ್ಥಳ ತಲಕಾವೇರಿಗೆ ಪತ್ನಿ ಹಾಗೂ ಸಂಪುಟದ ಕೆಲವು ಸಹೋದ್ಯೋಗಿಗಳ ಜೊತೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮೂಢನಂಬಿಕೆಯನ್ನು ತಳ್ಳಿಹಾಕಿದ್ದಾರೆ.

ತಲಕಾವೇರಿಗೆ ಮುಖ್ಯಮಂತ್ರಿ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ನಂಬಿಕೆ ಇಲ್ಲಿ ಮೊದಲಿನಿಂದಲೂ ಇತ್ತು. ಈ ಬಗ್ಗೆ ಮಾಧ್ಯಮದವರು ಅವರನ್ನು ಪ್ರಶ್ನಿಸಿದಾಗ, ನಾನು ಇಂತಹ ಮೂಢನಂಬಿಕೆಗಳನ್ನು ನಂಬುವುದಿಲ್ಲ. ಅಧಿಕಾರ ನನಗೆ ದೇವರು ಕೊಟ್ಟಿದ್ದು, ದೇವರೇ ಕಾಪಾಡುತ್ತಾನೆ ಎಂದರು.

ಭಾಗಮಂಡಲ, ತ್ರಿವೇಣಿ ಸಂಗಮಕ್ಕೆ ಆಗಮಿಸಿ ಭಂಗಂಡೇಶ್ವರ ದೇವರಿಗೆ ಸೇವೆ ಸಲ್ಲಿಸಿ ನಂತರ ತಲಕಾವೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮನಸ್ಸಿನಲ್ಲಿ ಸಂಕಲ್ಪ ಮಾಡಿಕೊಂಡರು.

ಅವರ ಜೊತೆ ಪತ್ನಿ ಅನಿತಾ ಕುಮಾರಸ್ವಾಮಿ, ಸಚಿವರಾದ ಡಿ ಕೆ ಶಿವಕುಮಾರ್, ಸಾ.ರಾ. ಮಹೇಶ್ ಕೂಡ ಇದ್ದರು. ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಕಾವೇರಿ ನದಿಯ ನಾಲ್ಕು ಜಲಾಶಯಗಳು ಭರ್ತಿಯಾಗಿದ್ದು ಬಾಗಿನ ಸಲ್ಲಿಸಲು ಭಾಗಮಂಡಲ ಮತ್ತು ತಲಕಾವೇರಿಗೆ ಭೇಟಿ ನೀಡಿದರು.

ಚಾಮರಾಜನಗರಕ್ಕೆ ಕಾಲಿಟ್ಟರೆ ಮುಖ್ಯಮಂತ್ರಿಗಳ ಅಧಿಕಾರ ಹೋಗುತ್ತದೆ ಎಂಬ ನಂಬಿಕೆಯಿದ್ದಂತೆ ತಲಕಾವೇರಿಗೆ ಭೇಟಿ ನೀಡಿದರೆ ಕೂಡ ಮುಖ್ಯಮಂತ್ರಿಗಳು ಶೀಘ್ರವೇ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ಹಿಂದಿನಿಂದಲೂ ಇದೆ.

ಈ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಧರ್ಮವನ್ನು ಯಾರು ಕಾಪಾಡುತ್ತಾರೋ ಅವರನ್ನು ಧರ್ಮ ಕಾಪಾಡುತ್ತದೆ . ಧರ್ಮ ಮತ್ತು ಸುಭಿಕ್ಷೆಯಿಂದ ರಾಜ್ಯವನ್ನು ನಡೆಸುವ ಕಾರ್ಯವನ್ನು ಸರಕಾರ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ತಾಯಿಯ ಸನ್ನಿಧಾನಕ್ಕೆ ಬಂದು ಪೂಜೆ ಸಲ್ಲಿಸಲಾಗಿದೆ. .

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

52 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

59 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

1 hour ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

1 hour ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago