Featured

ಅಧಿಕಾರ ನಿರ್ವಹಿಸುವ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿಲ್ಲ: ನ್ಯೂಜಿಲೆಂಡ್ ಪ್ರಧಾನಿ ರಾಜೀನಾಮೆ ಘೋಷಣೆ – Vishwanews24

ಅಧಿಕಾರ ನಿರ್ವಹಿಸುವ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿಲ್ಲ: ನ್ಯೂಜಿಲೆಂಡ್ ಪ್ರಧಾನಿ ರಾಜೀನಾಮೆ ಘೋಷಣೆ

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ ಪ್ರಧಾನಿ  ಜಸಿಂಡಾ ಅರ್ಡೆರ್ನ್ ಅವರು ಮುಂದಿನ ತಿಂಗಳು ರಾಜೀನಾಮೆ ನೀಡುವುದಾಗಿ ಗುರುವಾರ ಘೋಷಿಸಿದ್ದಾರೆ.

ನಾನು ಅಧಿಕಾರ ನಿರ್ವಹಿಸುವ ಸಂಪೂರ್ಣ ಸಾಮರ್ಥ್ಯವನ್ನು ಹೊಂದಿಲ್ಲ. ರಾಜೀನಾಮೆ ನಿರ್ಧಾರ ನನ್ನದೇ ಆಗಿದೆ. ದೇಶವನ್ನು ಮುನ್ನಡೆಸುವುದು ಅತ್ಯಂತ ವಿಷೇಷವಾದ ಕೆಲಸ. ಹೀಗಾಗಿ ರಾಜೀನಾಮೆ ನೀಡಲು ಇದು ಉತ್ತಮ ಸಮಯವಾಗಿದೆ ಎಂದು ಅರ್ಡೆರ್ನ್ ತಿಳಿಸಿದ್ದಾರೆ.

ಮುಂದಿನ ಫೆಬ್ರವರಿ 2 ರಂದು ತಾವು ರಾಜೀನಾಮೆ ನೀಡುವುದಾಗಿ ಅರ್ಡೆರ್ನ್ ತಿಳಿಸಿದ್ದಾರೆ. ಅಕ್ಟೋಬರ್ 14 ರಂದು ಮುಂದಿನ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಅಲ್ಲಿಯವರೆಗೆ ತಾವು ಚುನಾವಣಾ ಸಂಸದರಾಗಿ ಮುಂದುವರಿಯುವುದಾಗಿ ಹೇಳಿದ್ದಾರೆ.

2017 ರಲ್ಲಿ ಸಮ್ಮಿಶ್ರ ಸರ್ಕಾರದಿಂದ ಪ್ರಧಾನ ಮಂತ್ರಿಯಾದ ಅರ್ಡೆರ್ನ್ ಬಳಿಕ 3 ವರ್ಷಗಳ ನಂತರ ನಡೆದ ಚುನಾವಣೆಯಲ್ಲಿ ತಮ್ಮ ಕೇಂದ್ರ-ಲೆಫ್ಟ್ ಲೇಬರ್ ಪಕ್ಷವನ್ನು ಗೆಲ್ಲಿಸಿದ್ದರು. ಇತ್ತೀಚಿನ ಸಮೀಕ್ಷೆಗಳಲ್ಲಿ ಅವರ ಪಕ್ಷ ಹಾಗೂ ವೈಯಕ್ತಿಕ ಜನಪ್ರಿಯತೆ ಕುಸಿತ ಕಂಡಿದೆ.

52 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ನ್ಯೂಜಿಲೆಂಡ್ ಕೋವಿಡ್ ಬಂದಾಗ ಶೂನ್ಯ ಕೋವಿಡ್ ನೀತಿಯನ್ನು ಅನುಸರಿಸಿತ್ತು. ಸಣ್ಣ ಜನ ಸಂಖ್ಯೆ ಹೊಂದಿದ ದೇಶವಾಗಿದ್ದರೂ ದೇಶವನ್ನು ಲಾಕ್‌ಡೌನ್ ಮಾಡಿದ್ದಕ್ಕೆ ಬಹಳ ಟೀಕೆಗೆ ಗುರಿಯಾಗಿತ್ತು. 1 ಪ್ರಕರಣ ದಾಖಲಾದ ಕೂಡಲೇ ದೇಶವನ್ನು ಸಂಪೂರ್ಣ ಲಾಕ್‌ಡೌನ್ ಮಾಡಿದ್ದಕ್ಕೆ ಜಸಿಂಡಾ ಅರ್ಡೆರ್ನ್ ವಿರುದ್ಧ ಕಟು ಟೀಕೆ ವ್ಯಕ್ತವಾಗಿತ್ತು.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK

Vishwa News 24

Recent Posts

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

9 minutes ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

22 minutes ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

41 minutes ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

23 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

23 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

24 hours ago