ಬಳ್ಳಾರಿ: ಕಾಂಗ್ರೆಸ್ ನಿಂದ ಆಫರ್ ಬಂದಿರಲಿ, ಬರದಿರಲಿ, ಕರೆದಿರಬಹುದು. ಯಾರೇ ಕರೆದರೂ ಹೋಗಲು ನನ್ನ ಮನಸ್ಥಿತಿ ಇರಬೇಕು. ಬಿಜೆಪಿ ನನ್ನ ತಾಯಿ. ನನಗೆ ಗೌರವ ಕೊಟ್ಟಿರುವ ಕಾಂಗ್ರೆಸ್ ನವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಬಿಜೆಪಿಯಲ್ಲಿ ರೆಬೆಲ್ ಆಗಿರುವ ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ನಾಯಕರು ಆಹ್ವಾನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.
ನಾವು ಒಳ್ಳೆಯವರಿದ್ದರೇನೆ ಕರೆಯುವುದು. ರಾಮುಲು ಒಳ್ಳೆಯವರಾಗಿ ಕಂಡಿದ್ದಾರೆ. ನನ್ನ ಮೇಲೆ ಗೌರವದಿಂದ ಇಟ್ಟಿದ್ದಾರೆ. ಅದಕ್ಕೆ ಆ ಗೌರವದಿಂದ ಕರೆಯುತ್ತಿದ್ದಾರೆ. ಕಾಂಗ್ರೆಸ್ ನವರು ರಾಜಕೀಯ ಹೊರತುಪಡಿಸಿ, ಅಭಿಮಾನದಿಂದ ಮಾತನಾಡಿದ್ದಾರೆ ಎಂದರು.
ನನ್ನ ನಿಲುವು ವೆರಿ ಕ್ಲಿಯರ್. ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದ ರಾಮುಲು ರಾಜ್ಯದಲ್ಲಿ ಎಲ್ಲಾ ಕಡೆ ರಾಮುಲು ಉಪ ಮುಖ್ಯಮಂತ್ರಿ ಆಗಬೇಕು ಎನ್ನುವುದಿತ್ತು. ಅಧಿಕಾರ ಶಾಶ್ವತ ಅಲ್ಲ ಎಂದರು.
ಇನ್ನೂ ಕಾಂಗ್ರೆಸ್ ಸೇರುತ್ತೀರಾ ಎನ್ನುವ ವಿಚಾರಕ್ಕೂ ಪ್ರತಿಕ್ರಿಯಿಸಿದ ರಾಮುಲು, ಮಾಧ್ಯಮದ ಮೂಲಕ ಕಾಂಗ್ರೆಸ್ ನವರು ಬಹಿರಂಗವಾಗಿ ಕರೆಯುತ್ತಿದ್ದಾರೆ. ಏನೇ ಮಾಡಬೇಕಿದ್ದರೂ ನಿಮ್ಮನ್ನೆಲ್ಲಾ ಕೂರಿಸಿಕೊಳ್ಳುತ್ತೇನೆ. ಎಲ್ಲವನ್ನೂ ಓಪನ್ ಆಗಿ ಹೇಳುತ್ತೇನೆ. ಹಾಗಿದ್ದಲ್ಲಿ ನಿಮಗೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…