ಬಳ್ಳಾರಿ: ಕಾಂಗ್ರೆಸ್ ನಿಂದ ಆಫರ್ ಬಂದಿರಲಿ, ಬರದಿರಲಿ, ಕರೆದಿರಬಹುದು. ಯಾರೇ ಕರೆದರೂ ಹೋಗಲು ನನ್ನ ಮನಸ್ಥಿತಿ ಇರಬೇಕು. ಬಿಜೆಪಿ ನನ್ನ ತಾಯಿ. ನನಗೆ ಗೌರವ ಕೊಟ್ಟಿರುವ ಕಾಂಗ್ರೆಸ್ ನವರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಬಿಜೆಪಿಯಲ್ಲಿ ರೆಬೆಲ್ ಆಗಿರುವ ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ನಾಯಕರು ಆಹ್ವಾನಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು.
ನಾವು ಒಳ್ಳೆಯವರಿದ್ದರೇನೆ ಕರೆಯುವುದು. ರಾಮುಲು ಒಳ್ಳೆಯವರಾಗಿ ಕಂಡಿದ್ದಾರೆ. ನನ್ನ ಮೇಲೆ ಗೌರವದಿಂದ ಇಟ್ಟಿದ್ದಾರೆ. ಅದಕ್ಕೆ ಆ ಗೌರವದಿಂದ ಕರೆಯುತ್ತಿದ್ದಾರೆ. ಕಾಂಗ್ರೆಸ್ ನವರು ರಾಜಕೀಯ ಹೊರತುಪಡಿಸಿ, ಅಭಿಮಾನದಿಂದ ಮಾತನಾಡಿದ್ದಾರೆ ಎಂದರು.
ನನ್ನ ನಿಲುವು ವೆರಿ ಕ್ಲಿಯರ್. ನಾನು ಬಿಜೆಪಿಯಲ್ಲೇ ಇರುತ್ತೇನೆ ಎಂದ ರಾಮುಲು ರಾಜ್ಯದಲ್ಲಿ ಎಲ್ಲಾ ಕಡೆ ರಾಮುಲು ಉಪ ಮುಖ್ಯಮಂತ್ರಿ ಆಗಬೇಕು ಎನ್ನುವುದಿತ್ತು. ಅಧಿಕಾರ ಶಾಶ್ವತ ಅಲ್ಲ ಎಂದರು.
ಇನ್ನೂ ಕಾಂಗ್ರೆಸ್ ಸೇರುತ್ತೀರಾ ಎನ್ನುವ ವಿಚಾರಕ್ಕೂ ಪ್ರತಿಕ್ರಿಯಿಸಿದ ರಾಮುಲು, ಮಾಧ್ಯಮದ ಮೂಲಕ ಕಾಂಗ್ರೆಸ್ ನವರು ಬಹಿರಂಗವಾಗಿ ಕರೆಯುತ್ತಿದ್ದಾರೆ. ಏನೇ ಮಾಡಬೇಕಿದ್ದರೂ ನಿಮ್ಮನ್ನೆಲ್ಲಾ ಕೂರಿಸಿಕೊಳ್ಳುತ್ತೇನೆ. ಎಲ್ಲವನ್ನೂ ಓಪನ್ ಆಗಿ ಹೇಳುತ್ತೇನೆ. ಹಾಗಿದ್ದಲ್ಲಿ ನಿಮಗೆ ತಿಳಿಸುತ್ತೇನೆ ಎಂದು ಸ್ಪಷ್ಟಪಡಿಸಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…