ನವದೆಹಲಿ: ಲೋಕಸಭೆ ಚುನಾವಣೆ ಘೊಷಣೆಯಾಗುವುದಕ್ಕೆ ಮುನ್ನ ಕಾಂಗ್ರೆಸ್ ಪಕ್ಷದ ವರಿಷ್ಠರು ಅತ್ಯಂತ ಪ್ರಮುಖ ನಿರ್ಧಾರವೊಂದನ್ನು ತಾಳಿದ್ದಾರೆ. ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಗಳು ಪ್ರಿಯಾಂಕಾ ಗಾಂಧಿ ರಾಜಕೀಯಕ್ಕೆ ಅಧಿಕೃತವಾಗಿ ಪ್ರವೇಶ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬುಧವಾರ, ಪ್ರಿಯಾಂಕಾ ಗಾಂಧಿಯವರನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿಗೆ ಪೂರ್ವ ಉತ್ತರ ಪ್ರದೇಶದ ಜವಾಬ್ದಾರಿ ನೀಡಲಾಗಿದೆ. ಫೆಬ್ರವರಿ ಮೊದಲ ವಾರದಲ್ಲಿ ಪ್ರಿಯಾಂಕಾ ಗಾಂಧಿ ತಮ್ಮ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತರು, ಪ್ರಿಯಾಂಕಾ ಗಾಂಧಿಯವರನ್ನು ಒತ್ತಾಯ ಮಾಡುತ್ತ ಬಂದಿದ್ದರು. ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡುವಂತೆ ಕಾರ್ಯಕರ್ತರು ಒತ್ತಡ ಹೇರಿದ್ದರು. ಈಗ ಅವ್ರ ಆಸೆ ಈಡೇರಿದೆ. ಈ ಹಿಂದೆ ಪ್ರಿಯಾಂಕಾ ಗಾಂಧಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆದ್ರೆ ಅಧಿಕೃತವಾಗಿ ರಾಜಕೀಯಕ್ಕೆ ಪ್ರವೇಶ ಮಾಡಿರಲಿಲ್ಲ.
ಕಾಂಗ್ರೆಸ್ ಈ ಬೆಳವಣಿಗೆ 2019 ರ ಲೋಕಸಭೆ ಚುನಾವಣೆ ಮೇಲೆ ಮಹತ್ವದ ಪ್ರಭಾವ ಬೀರಲಿದೆ. ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಪಾತ್ರ ಬಹುಮುಖ್ಯ. ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜವಾದಿ ಪಕ್ಷ ಕಾಂಗ್ರೆಸ್ ಕೈ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಏಕಾಂಗಿ ಹೋರಾಟ ನಡೆಸುವ ಸಾಧ್ಯತೆಯಿದೆ.
ಮೂಡುಬಿದಿರೆ: ಬೈಕಿಗೆ ಆಟೋ ರಿಕ್ಷಾ ಡಿಕ್ಕಿ ; ನಿವೃತ್ತ ಶಿಕ್ಷಕ ಜಿ ಕೆ ಭಟ್ ನಿಧನ ಮೂಡುಬಿದಿರೆ: ಪೇಟೆಯ ರತನ್…
ಬಂಟ್ವಾಳ : ಬ್ಯಾಂಕ್ ಕಳ್ಳತನ ಪ್ರಕರಣ ; ಪ್ರಮುಖ ಆರೋಪಿಯ ಬಂಧನ ಬಂಟ್ವಾಳ: ಫರಂಗಿಪೇಟೆಯ ಕೆನರಾ ಬ್ಯಾಂಕ್ ನಲ್ಲಿ ನಡೆದ…
ಧರ್ಮಸ್ಥಳ ಸೌಜನ್ಯ ಕೊಲೆ ಕೇಸ್ : ಮರು ತನಿಖೆ ಬಗ್ಗೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್ ಬೆಳ್ತಂಗಡಿ: ದೇಶದ ಗಮನ…
ಉಡುಪಿ : ಅಕ್ಕಕೆಫೆ ನಿರ್ವಹಣೆ - ಜು.28ರಂದು ಸಂಜೀವಿನಿ ಸ್ವ-ಸಹಾಯ ಗುಂಪುಗಳಿಗೆ ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ರಾಮನ ಹೆಸರಿನಲ್ಲಿ ರಾಜಕೀಯ ನಾಟಕ ನಿಲ್ಲಿಸಿ: ಕಾಂಗ್ರೆಸ್ಗೆ ಬಿಜೆಪಿ ಕಾಪು ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ ತಿರುಗೇಟು ಶ್ರೀರಾಮ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…