Featured

ಪ್ರಥಮ ಬಾರಿಗೆ ಅಧಿವೇಶನದಲ್ಲಿ ಪ್ರತಿಪಕ್ಷ ಸ್ಥಾನದಲ್ಲಿ 104 ಶಾಸಕರು : ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ ;!

ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ.

ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮದಾಗಿಸಿಕೊಂಡಿದ್ದಾರೆ. 11 ವರ್ಷಗಳ ಬಳಿಕ ವಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು, ಒಟ್ಟು ಮೂರು ಬಾರಿ ಈ ಸ್ಥಾನವನ್ನು ಏರಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ(1994 ಡಿಸೆಂಬರ್ 27 ನಿಂದ 1996 ಡಿಸೆಂಬರ್ 18) ಮೊದಲ ಬಾರಿ ವಿಪಕ್ಷ ನಾಯಕರಾಗಿದ್ದರು. ಮಾಜಿ ಸಿಎಂ ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ (2004ರ ಜೂನ್ 10 ರಿಂದ, 2006 ಫೆಬ್ರವರಿ 3ರವರೆಗೆ) ಎರಡನೇ ಬಾರಿ ವಿಪಕ್ಷ ನಾಯಕರಾಗಿದ್ದರು. ಈಗ 2018ರ ಮೇ 25 ರಿಂದ ಮೂರನೇ ಬಾರಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 ಶಾಸಕರು ಆಡಳಿತ ನಡೆಸುತ್ತಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಭಾಗಿ ಆಗುವ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು‌ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದಾರೆ. ಉತ್ತಮ‌ ಕೆಲಸಗಳಿಗೆ ಪ್ರತಿಪಕ್ಷವಾಗಿ ನಾವು ಸಹಕಾರ ನೀಡುತ್ತೇವೆ. ಬಜೆಟ್​ನಲ್ಲಿ ಏನು ಯೋಜನೆ ಘೋಷಣೆ ಮಾಡುತ್ತಾರೆ ಕಾದು ನೋಡಬೇಕು ಎಂದರು.

ವಿಪಕ್ಷ ನಾಯಕ ಕೊಠಡಿ ಪೂಜೆ 
ಹನ್ನೊಂದು ವರ್ಷಗಳ ಬಳಿಕ ಬಿ.ಎಸ್‌.ಯಡಿಯೂರಪ್ಪ ಮತ್ತೆ ವಿಪಕ್ಷ ನಾಯಕರಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೂ ಮುಂಚೆ ವಿಧಾನಸೌಧದಲ್ಲಿ ವಿಪಕ್ಷ ನಾಯಕರ ಕೊಠಡಿಗೆ ಪುರೋಹಿತರಿಂದ ಪೂಜೆ ಮಾಡಿಸಿದ್ದಾರೆ. ಬಿಎಸ್​ವೈ ಇದುವರೆಗೂ ಮೂರು ಬಾರಿ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕಚೇರಿ ಪೂಜೆಯಲ್ಲಿ ಶಾಸಕರಾದ ಸಿ.ಎಂ. ಉದಾಸಿ, ರವೀಂದ್ರನಾಥ್, ಗೋವಿಂದ ಕಾರಜೋಳ, ಮಾಡಾಳ್ ವಿರೂಪಾಕ್ಷಪ್ಪ, ಸಿ.ಸಿ.ಪಾಟೀಲ್ ಸೇರಿ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

1 day ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

1 day ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

1 day ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

1 day ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

1 day ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

1 day ago