Featured

ಪ್ರಥಮ ಬಾರಿಗೆ ಅಧಿವೇಶನದಲ್ಲಿ ಪ್ರತಿಪಕ್ಷ ಸ್ಥಾನದಲ್ಲಿ 104 ಶಾಸಕರು : ಕರ್ನಾಟಕ ರಾಜಕೀಯದಲ್ಲಿ ಹೊಸ ದಾಖಲೆ ಬರೆದ ಬಿಎಸ್‍ವೈ ;!

ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ.

ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮದಾಗಿಸಿಕೊಂಡಿದ್ದಾರೆ. 11 ವರ್ಷಗಳ ಬಳಿಕ ವಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು, ಒಟ್ಟು ಮೂರು ಬಾರಿ ಈ ಸ್ಥಾನವನ್ನು ಏರಿದ್ದಾರೆ.

ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ(1994 ಡಿಸೆಂಬರ್ 27 ನಿಂದ 1996 ಡಿಸೆಂಬರ್ 18) ಮೊದಲ ಬಾರಿ ವಿಪಕ್ಷ ನಾಯಕರಾಗಿದ್ದರು. ಮಾಜಿ ಸಿಎಂ ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ (2004ರ ಜೂನ್ 10 ರಿಂದ, 2006 ಫೆಬ್ರವರಿ 3ರವರೆಗೆ) ಎರಡನೇ ಬಾರಿ ವಿಪಕ್ಷ ನಾಯಕರಾಗಿದ್ದರು. ಈಗ 2018ರ ಮೇ 25 ರಿಂದ ಮೂರನೇ ಬಾರಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.

ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 ಶಾಸಕರು ಆಡಳಿತ ನಡೆಸುತ್ತಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಭಾಗಿ ಆಗುವ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು‌ ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದಾರೆ. ಉತ್ತಮ‌ ಕೆಲಸಗಳಿಗೆ ಪ್ರತಿಪಕ್ಷವಾಗಿ ನಾವು ಸಹಕಾರ ನೀಡುತ್ತೇವೆ. ಬಜೆಟ್​ನಲ್ಲಿ ಏನು ಯೋಜನೆ ಘೋಷಣೆ ಮಾಡುತ್ತಾರೆ ಕಾದು ನೋಡಬೇಕು ಎಂದರು.

ವಿಪಕ್ಷ ನಾಯಕ ಕೊಠಡಿ ಪೂಜೆ 
ಹನ್ನೊಂದು ವರ್ಷಗಳ ಬಳಿಕ ಬಿ.ಎಸ್‌.ಯಡಿಯೂರಪ್ಪ ಮತ್ತೆ ವಿಪಕ್ಷ ನಾಯಕರಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೂ ಮುಂಚೆ ವಿಧಾನಸೌಧದಲ್ಲಿ ವಿಪಕ್ಷ ನಾಯಕರ ಕೊಠಡಿಗೆ ಪುರೋಹಿತರಿಂದ ಪೂಜೆ ಮಾಡಿಸಿದ್ದಾರೆ. ಬಿಎಸ್​ವೈ ಇದುವರೆಗೂ ಮೂರು ಬಾರಿ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕಚೇರಿ ಪೂಜೆಯಲ್ಲಿ ಶಾಸಕರಾದ ಸಿ.ಎಂ. ಉದಾಸಿ, ರವೀಂದ್ರನಾಥ್, ಗೋವಿಂದ ಕಾರಜೋಳ, ಮಾಡಾಳ್ ವಿರೂಪಾಕ್ಷಪ್ಪ, ಸಿ.ಸಿ.ಪಾಟೀಲ್ ಸೇರಿ ಹಲವರು ಉಪಸ್ಥಿತರಿದ್ದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago