ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ.
ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮದಾಗಿಸಿಕೊಂಡಿದ್ದಾರೆ. 11 ವರ್ಷಗಳ ಬಳಿಕ ವಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು, ಒಟ್ಟು ಮೂರು ಬಾರಿ ಈ ಸ್ಥಾನವನ್ನು ಏರಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ(1994 ಡಿಸೆಂಬರ್ 27 ನಿಂದ 1996 ಡಿಸೆಂಬರ್ 18) ಮೊದಲ ಬಾರಿ ವಿಪಕ್ಷ ನಾಯಕರಾಗಿದ್ದರು. ಮಾಜಿ ಸಿಎಂ ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ (2004ರ ಜೂನ್ 10 ರಿಂದ, 2006 ಫೆಬ್ರವರಿ 3ರವರೆಗೆ) ಎರಡನೇ ಬಾರಿ ವಿಪಕ್ಷ ನಾಯಕರಾಗಿದ್ದರು. ಈಗ 2018ರ ಮೇ 25 ರಿಂದ ಮೂರನೇ ಬಾರಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.
ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 ಶಾಸಕರು ಆಡಳಿತ ನಡೆಸುತ್ತಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಭಾಗಿ ಆಗುವ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದಾರೆ. ಉತ್ತಮ ಕೆಲಸಗಳಿಗೆ ಪ್ರತಿಪಕ್ಷವಾಗಿ ನಾವು ಸಹಕಾರ ನೀಡುತ್ತೇವೆ. ಬಜೆಟ್ನಲ್ಲಿ ಏನು ಯೋಜನೆ ಘೋಷಣೆ ಮಾಡುತ್ತಾರೆ ಕಾದು ನೋಡಬೇಕು ಎಂದರು.
ವಿಪಕ್ಷ ನಾಯಕ ಕೊಠಡಿ ಪೂಜೆ
ಹನ್ನೊಂದು ವರ್ಷಗಳ ಬಳಿಕ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಪಕ್ಷ ನಾಯಕರಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೂ ಮುಂಚೆ ವಿಧಾನಸೌಧದಲ್ಲಿ ವಿಪಕ್ಷ ನಾಯಕರ ಕೊಠಡಿಗೆ ಪುರೋಹಿತರಿಂದ ಪೂಜೆ ಮಾಡಿಸಿದ್ದಾರೆ. ಬಿಎಸ್ವೈ ಇದುವರೆಗೂ ಮೂರು ಬಾರಿ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕಚೇರಿ ಪೂಜೆಯಲ್ಲಿ ಶಾಸಕರಾದ ಸಿ.ಎಂ. ಉದಾಸಿ, ರವೀಂದ್ರನಾಥ್, ಗೋವಿಂದ ಕಾರಜೋಳ, ಮಾಡಾಳ್ ವಿರೂಪಾಕ್ಷಪ್ಪ, ಸಿ.ಸಿ.ಪಾಟೀಲ್ ಸೇರಿ ಹಲವರು ಉಪಸ್ಥಿತರಿದ್ದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…