ಬೆಂಗಳೂರು: ರಾಜ್ಯದ ಕಡಿಮೆ ಅವಧಿಯ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ದಾಖಲೆ ಬರೆದಿದ್ದರು. ಆದರೆ ಈಗ ಮತ್ತೊಂದು ದಾಖಲೆ ಅವರ ಹೆಸರಿಗೆ ಸೇರ್ಪಡೆಯಾಗಿದೆ.
ರಾಜ್ಯ ರಾಜಕೀಯದಲ್ಲಿ ಅತಿ ಹೆಚ್ಚು ಬಾರಿಗೆ ವಿಧಾನಸಭೆಯ ವಿಪಕ್ಷ ನಾಯಕರಾದ ದಾಖಲೆಯನ್ನು ಸದ್ಯ ಬಿ.ಎಸ್.ಯಡಿಯೂರಪ್ಪ ಅವರು ತಮ್ಮದಾಗಿಸಿಕೊಂಡಿದ್ದಾರೆ. 11 ವರ್ಷಗಳ ಬಳಿಕ ವಿಪಕ್ಷ ನಾಯಕರಾಗಿರುವ ಯಡಿಯೂರಪ್ಪ ಅವರು, ಒಟ್ಟು ಮೂರು ಬಾರಿ ಈ ಸ್ಥಾನವನ್ನು ಏರಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ(1994 ಡಿಸೆಂಬರ್ 27 ನಿಂದ 1996 ಡಿಸೆಂಬರ್ 18) ಮೊದಲ ಬಾರಿ ವಿಪಕ್ಷ ನಾಯಕರಾಗಿದ್ದರು. ಮಾಜಿ ಸಿಎಂ ಧರ್ಮಸಿಂಗ್ ಮುಖ್ಯಮಂತ್ರಿ ಆಗಿದ್ದಾಗ (2004ರ ಜೂನ್ 10 ರಿಂದ, 2006 ಫೆಬ್ರವರಿ 3ರವರೆಗೆ) ಎರಡನೇ ಬಾರಿ ವಿಪಕ್ಷ ನಾಯಕರಾಗಿದ್ದರು. ಈಗ 2018ರ ಮೇ 25 ರಿಂದ ಮೂರನೇ ಬಾರಿ ವಿರೋಧ ಪಕ್ಷದ ನಾಯಕರಾಗಿದ್ದಾರೆ.
ಜಂಟಿ ಅಧಿವೇಶನದಲ್ಲಿ ಇದೇ ಮೊದಲ ಬಾರಿಗೆ ವಿಪಕ್ಷ ಸ್ಥಾನದಲ್ಲಿ 104 ಶಾಸಕರು ಕೂರುತ್ತಿದ್ದಾರೆ. ಹಾಗೇ 37 ಶಾಸಕರು ಆಡಳಿತ ನಡೆಸುತ್ತಿರುವುದು ಇತಿಹಾಸದಲ್ಲಿ ಇದೇ ಮೊದಲು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಭಾಗಿ ಆಗುವ ಮುಂಚೆ ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿ. ರೈತರ ಸಂಪೂರ್ಣ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದಾರೆ. ಉತ್ತಮ ಕೆಲಸಗಳಿಗೆ ಪ್ರತಿಪಕ್ಷವಾಗಿ ನಾವು ಸಹಕಾರ ನೀಡುತ್ತೇವೆ. ಬಜೆಟ್ನಲ್ಲಿ ಏನು ಯೋಜನೆ ಘೋಷಣೆ ಮಾಡುತ್ತಾರೆ ಕಾದು ನೋಡಬೇಕು ಎಂದರು.
ವಿಪಕ್ಷ ನಾಯಕ ಕೊಠಡಿ ಪೂಜೆ
ಹನ್ನೊಂದು ವರ್ಷಗಳ ಬಳಿಕ ಬಿ.ಎಸ್.ಯಡಿಯೂರಪ್ಪ ಮತ್ತೆ ವಿಪಕ್ಷ ನಾಯಕರಾಗಿ ಅಧಿವೇಶನದಲ್ಲಿ ಭಾಗಿಯಾಗುತ್ತಿದ್ದು, ಇದಕ್ಕೂ ಮುಂಚೆ ವಿಧಾನಸೌಧದಲ್ಲಿ ವಿಪಕ್ಷ ನಾಯಕರ ಕೊಠಡಿಗೆ ಪುರೋಹಿತರಿಂದ ಪೂಜೆ ಮಾಡಿಸಿದ್ದಾರೆ. ಬಿಎಸ್ವೈ ಇದುವರೆಗೂ ಮೂರು ಬಾರಿ ವಿಪಕ್ಷ ನಾಯಕರಾಗಿ ಜವಾಬ್ದಾರಿ ನಿರ್ವಹಿಸಿದ್ದಾರೆ. ಕಚೇರಿ ಪೂಜೆಯಲ್ಲಿ ಶಾಸಕರಾದ ಸಿ.ಎಂ. ಉದಾಸಿ, ರವೀಂದ್ರನಾಥ್, ಗೋವಿಂದ ಕಾರಜೋಳ, ಮಾಡಾಳ್ ವಿರೂಪಾಕ್ಷಪ್ಪ, ಸಿ.ಸಿ.ಪಾಟೀಲ್ ಸೇರಿ ಹಲವರು ಉಪಸ್ಥಿತರಿದ್ದರು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…