ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ವಿರುದ್ದ ಹೇಳಿಕೆ ನೀಡಿದ್ದ ಬಿಜೆಪಿಯ ಮುಖಂಡ ಅನಂತಕುಮಾರ್ ಹೆಗಡೆ ಅವರನ್ನು ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮಾ ಗಾಂಧಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಈ ಹಿಂದೆ ಅನಂತ್ ಕುಮಾರ್ ಹೆಗಡೆ ಅವರು ಗಾಂಧಿ ಕೊಂದ ನಾಥೂರಾಮ್ ಗೋಡ್ಸೆ ಸಮರ್ಥಿಸಿಕೊಂಡು ಟ್ವೀಟ್ ಮಾಡಿದ್ದು, ಬಳಿಕ ತಮ್ಮ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಖಾತೆ ಹ್ಯಾಕ್ ಅಗಿತ್ತು ಎಂದು ಸಮರ್ಥನೆ ನೀಡಿದ್ದರು.
ಈಗ ಗಾಂಧಿ ಅಂಥವರನ್ನು ”ಮಹಾತ್ಮ” ಎಂದು ಭಾರತದಲ್ಲಿ ಏಕೆ ಕರೆಯುತ್ತಾರೆ. ಗಾಂಧಿ ನಡೆಸಿದ ಸ್ವಾತಂತ್ರ್ಯ ಹೋರಾಟವನ್ನು ದೊಡ್ಡ ನಾಟಕ ಎಂದು ಹೇಳಿದ್ದಾರೆ.
ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಈ ನಾಯಕರನ್ನು ಪೊಲೀಸರು ಎಂದು ಮುಟ್ಟಿಲ್ಲ. ಬ್ರಿಟಿಷರ ಅನುಮತಿಯಿಂದ ಸತ್ಯಾಗ್ರಹ, ಪ್ರತಿಭಟನೆ ನಾಟಕ ನಡೆಸಲಾಗಿತ್ತು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವೇ ಅಲ್ಲ, ಅನುಕೂಲ ಸ್ವಾತಂತ್ರ್ಯ ಚಳವಳಿ ಎಂದು ಅನಂತಕುಮಾರ್ ಹೇಳಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಗಾಂಧಿ ಅವರು ನಡೆಸಿದ ಅಮರಣಾಂತ ಉಪವಾಸ ಸತ್ಯಾಗ್ರಹವೇ ಕಾರಣ ಎಂದು ಬಿಂಬಿಸಲಾಗಿದೆ. ಆದರೆ ಇದು ಸತ್ಯವಲ್ಲ, ಸತ್ಯಾಗ್ರಹದಿಂದ ಬ್ರಿಟಿಷರು ಭಾರತವನ್ನು ತೊರೆಯಲಿಲ್ಲ. ಭಾರತದ ಇತಿಹಾಸ ಓದಿದರೆ ನನ್ನ ರಕ್ತಕುದಿಯುತ್ತದೆ. ಹೇಗೆ ಇಂಥವರನ್ನು ಮಹಾತ್ಮ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮ ಗಾಂಧೀಜಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಅನಂತ್ ಕುಮಾರ ಹೆಗಡೆ ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಆಗ್ರಹಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…