ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ವಿರುದ್ದ ಹೇಳಿಕೆ ನೀಡಿದ್ದ ಬಿಜೆಪಿಯ ಮುಖಂಡ ಅನಂತಕುಮಾರ್ ಹೆಗಡೆ ಅವರನ್ನು ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮಾ ಗಾಂಧಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಹೇಳಿದ್ದಾರೆ.
ಈ ಹಿಂದೆ ಅನಂತ್ ಕುಮಾರ್ ಹೆಗಡೆ ಅವರು ಗಾಂಧಿ ಕೊಂದ ನಾಥೂರಾಮ್ ಗೋಡ್ಸೆ ಸಮರ್ಥಿಸಿಕೊಂಡು ಟ್ವೀಟ್ ಮಾಡಿದ್ದು, ಬಳಿಕ ತಮ್ಮ ಮೈಕ್ರೋಬ್ಲಾಗಿಂಗ್ ತಾಣ ಟ್ವಿಟ್ಟರ್ ಖಾತೆ ಹ್ಯಾಕ್ ಅಗಿತ್ತು ಎಂದು ಸಮರ್ಥನೆ ನೀಡಿದ್ದರು.
ಈಗ ಗಾಂಧಿ ಅಂಥವರನ್ನು ”ಮಹಾತ್ಮ” ಎಂದು ಭಾರತದಲ್ಲಿ ಏಕೆ ಕರೆಯುತ್ತಾರೆ. ಗಾಂಧಿ ನಡೆಸಿದ ಸ್ವಾತಂತ್ರ್ಯ ಹೋರಾಟವನ್ನು ದೊಡ್ಡ ನಾಟಕ ಎಂದು ಹೇಳಿದ್ದಾರೆ.
ಬ್ರಿಟಿಷರ ಬೆಂಬಲದಿಂದ ನಡೆದ ಪೂರ್ವನಿಯೋಜಿತ ನಾಟಕದಲ್ಲಿ ಗಾಂಧಿ ಪಾತ್ರಧಾರಿಯಾಗಿದ್ದರು. ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಈ ನಾಯಕರನ್ನು ಪೊಲೀಸರು ಎಂದು ಮುಟ್ಟಿಲ್ಲ. ಬ್ರಿಟಿಷರ ಅನುಮತಿಯಿಂದ ಸತ್ಯಾಗ್ರಹ, ಪ್ರತಿಭಟನೆ ನಾಟಕ ನಡೆಸಲಾಗಿತ್ತು. ಇದು ನಿಜವಾದ ಸ್ವಾತಂತ್ರ್ಯ ಹೋರಾಟವೇ ಅಲ್ಲ, ಅನುಕೂಲ ಸ್ವಾತಂತ್ರ್ಯ ಚಳವಳಿ ಎಂದು ಅನಂತಕುಮಾರ್ ಹೇಳಿದ್ದಾರೆ.
ಭಾರತಕ್ಕೆ ಸ್ವಾತಂತ್ರ್ಯ ಸಿಗಲು ಗಾಂಧಿ ಅವರು ನಡೆಸಿದ ಅಮರಣಾಂತ ಉಪವಾಸ ಸತ್ಯಾಗ್ರಹವೇ ಕಾರಣ ಎಂದು ಬಿಂಬಿಸಲಾಗಿದೆ. ಆದರೆ ಇದು ಸತ್ಯವಲ್ಲ, ಸತ್ಯಾಗ್ರಹದಿಂದ ಬ್ರಿಟಿಷರು ಭಾರತವನ್ನು ತೊರೆಯಲಿಲ್ಲ. ಭಾರತದ ಇತಿಹಾಸ ಓದಿದರೆ ನನ್ನ ರಕ್ತಕುದಿಯುತ್ತದೆ. ಹೇಗೆ ಇಂಥವರನ್ನು ಮಹಾತ್ಮ ಎಂದು ಕರೆಯಲಾಗುತ್ತದೆ ಎಂದಿದ್ದಾರೆ.
ಸ್ವಾತಂತ್ರ್ಯ ಹೋರಾಟಗಾರರು, ಮಹಾತ್ಮ ಗಾಂಧೀಜಿ ಅವರ ಮೇಲೆ ಬಿಜೆಪಿ ನಾಯಕರಿಗೆ ಸ್ವಲ್ಪವಾದರೂ ಗೌರವವಿದ್ದರೆ ಶೀಘ್ರವೇ ಅನಂತ್ ಕುಮಾರ ಹೆಗಡೆ ಅವರನ್ನು ಬಿಜೆಪಿಯಿಂದ ವಜಾಗೊಳಿಸಬೇಕು ಎಂದು ಡಿ.ಕೆ. ಸುರೇಶ್ ಆಗ್ರಹಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್ ಆಗಿ ಲೋಕಾರ್ಪಣೆ!…
ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…
ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…
ಬೆಂಗಳೂರು: ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…
ಗಾನಕೋಗಿಲೆ ಎಸ್.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…