Featured

ಅನಧಿಕೃತ ಜಾಹಿರಾತು ಫಲಕ ಅಳವಡಿಕೆ: ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಜಾಹೀರಾತು ಫಲಕ ಅಳವಡಿಕೆಗೆ ಬಳಸಿದ್ದ ಲೋಹದ ಚೌಕಟ್ಟು ತೆರವುಗೊಳಿಸದ ಸಂಬಂಧ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ರಸ್ತೆಯ ಪಂತರಪಾಳ್ಯದ ಬಳಿ ಸಚಿವ ಶಿವಕುಮಾರ್‌ ಅವರಿಗೆ ಸೇರಿದ ಜಾಗದಲ್ಲಿರುವ ಲೋಹದ ಚೌಕಟ್ಟು ತೆರವುಗೊಳಿಸದ ಬಗ್ಗೆ ಆರ್‌.ಆರ್‌.ನಗರ ಉಪವಿಭಾಗ ಸಹಾಯಕ ಕಂದಾಯ ಅಧಿಕಾರಿ ಮುತ್ತುರಾಜ್‌ ಅವರು ಪೊಲೀಸ್‌ ಠಾಣೆಗೆ ಸೆ. 24ರಂದು  ದೂರು ನೀಡಿದ್ದರು.

ಜಾಹೀರಾತು ಫಲಕಗಳಿಂದಾಗಿ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿರುವ ಬಗ್ಗೆ ಹೈಕೋರ್ಟ್‌ ಪಾಲಿಕೆಯನ್ನು ತರಾಟೆಗೆ ತೆಗೆದುಕೊಂಡಿತ್ತು. ಆ ಬಳಿಕ ನಗರದಲ್ಲಿ ಅನಧಿಕೃತವಾಗಿ ಜಾಹೀರಾತು ಫಲಕಗಳನ್ನು ಅಳವಡಿಸುವುದನ್ನು ಪಾಲಿಕೆ ನಿಷೇಧಿಸಿತ್ತು. ಬಿಬಿಎಂಪಿ ಆಯುಕ್ತರು ಎಲ್ಲ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್‌ಗಳನ್ನು ತೆರವುಗೊಳಿಸುವಂತೆ ಆಗಸ್ಟ್‌ 12ರಂದು ಸಾರ್ವಜನಿಕ ಪ್ರಕಟಣೆ ನೀಡಿದ್ದರು. ಇದರ ಬೆನ್ನಲ್ಲೇ ಪಾಲಿಕೆ ಅಧಿಕಾರಿಗಳು ಜಾಹೀರಾತು ಫಲಕ, ಹೋರ್ಡಿಂಗ್‌ ಹಾಗೂ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲು ಕ್ರಮ ಕೈಗೊಂಡಿದ್ದರು.

ಜಾಹೀರಾತು ಫಲಕಗಳನ್ನು ತೆರವುಗೊಳಿಸಿದ ಬಳಿಕವೂ ಕೆಲವೆಡೆ ಲೋಹದ ಚೌಕಟ್ಟುಗಳು ಹಾಗೆಯೇ ಉಳಿದಿದ್ದವು. ಇವುಗಳನ್ನು ಆಯಾ ಜಾಗದ ಮಾಲೀಕರೇ ಆಗಸ್ಟ್‌ 30ರ ಒಳಗೆ ತೆಗೆಯಿಸಬೇಕು ಎಂದು ಆಯುಕ್ತರು ಆಗಸ್ಟ್‌ 13 ರಂದು ಹಾಗೂ 15ರಂದು ಸಾರ್ವಜನಿಕ ಪ್ರಕಟಣೆ ನೀಡಿದ್ದರು. ಈ ಗಡುವು ಮುಗಿದ ಬಳಿಕವೂ ಕೆಲವರು ಲೋಹದ ಚೌಕಟ್ಟು ತೆಗೆಸಿರಲಿಲ್ಲ. ಮತ್ತೊಮ್ಮೆ ಕಾಲಾವಕಾಶ ನೀಡಿದ್ದ ಪಾಲಿಕೆ, ಸೆ. 6ರ ಒಳಗೆ ತೆರವುಗೊಳಿಸುವಂತೆ ಸೂಚಿಸಿತ್ತು.

‘ಜಾಗದ (ಸ್ವತ್ತು ಸಂಖ್ಯೆ 219/20 ಎ/23) ಮಾಲೀಕರಾದ ಶಿವಕುಮಾರ್‌ ಅವರಿಗೆ ನೋಟಿಸ್‌ ನೀಡಿದ ಬಳಿಕವೂ ಜಾಹೀರಾತು ಫಲಕ ಅಳವಡಿಸಿದ್ದ ಲೋಹದ ಚೌಕಟ್ಟು ತೆರವುಗೊಳಿಸದೆ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟು ಮಾಡಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ಎಆರ್‌ಒ ಮುತ್ತುರಾಜ್‌ ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago