ಅನರ್ಹಗೊಂಡಿದ್ದ ಕಾಂಗ್ರೆಸ್ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ : ಎಐಸಿಸಿ ಆದೇಶ -Vishwanews24
ನವದೆಹಲಿ : ದೋಸ್ತಿ ಸರಕಾರದ ವಿರುದ್ಧ ಬಂಡಾಯದ ಕಹಳೆ ಊದಿದ್ದ ಹಾಗೂ ನಂತರ ಅನರ್ಹಗೊಂಡಿದ್ದ ಕಾಂಗ್ರೆಸ್ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಿ ಎಐಸಿಸಿ ಆದೇಶ ಹೊರಡಿಸಿದೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಶಿಫಾರಸಿನ ಮೇರೆಗೆ ಅನರ್ಹಗೊಂಡ ಶಾಸಕರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟನೆ ಮಾಡಲಾಗಿದೆ.
ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಶ್ರೀಮಂತ್ ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಶಿವರಾಮ್ ಮಹಾಬಲೇಶ್ವರ ಹೆಬ್ಬಾರ್, ಬಿಸಿ ಪಾಟೀಲ್, ಆರ್. ಶಂಕರ್, ಆನಂದ್ ಸಿಂಗ್, ಡಾ.ಕೆ. ಸುಧಾಕರ್, ಬೈರತಿ ಬಸವರಾಜ್, ಎಸ್.ಟಿ. ಸೋಮಶೇಖರ್, ಮುನಿರತ್ನ, ಆರ್ ರೋಷನ್ ಬೇಗ್, ಎಂಟಿಬಿ ನಾಗರಾಜ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಉಚ್ಚಾಟನೆ ಮಾಡಲಾಗಿದೆ.

