ಬೆಂಗಳೂರು,: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.
ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ.
ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.
ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…