ನವದೆಹಲಿ:ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರಕ್ಕೆ ಮುಂದೂಡಿದೆ.
ಅನರ್ಹ ಶಾಸಕರ ಪರವಾಗಿ ಮುಕುಲ್ ರೊಹಟಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು ಮತ್ತು ಸ್ಪೀಕರ್ ಪರ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.
ಬುಧವಾರದಂದು ಅನರ್ಹ ಶಾಸಕರ ಪರ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಅನರ್ಹ ಶಾಸಕರ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ನಿಗದಿಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ಕೋರಿ ಪೀಠಕ್ಕೆ ಅರ್ಜಿ ಸಲ್ಲಿಸುವುದಾಗಿ ಅನರ್ಹ ಶಾಸಕರ ಪರ ವಾದಿಸುತ್ತಿರುವ ವಕೀಲ ಮುಕುಲ್ ರೋಹಟಗಿ ಅವರು ಹೇಳಿದರು. ಹೀಗಾಗಿ ಸುದೀರ್ಘ ವಿಚಾರಣೆಯ ಅಗತ್ಯ ಇರುವುದರಿಂದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡುತ್ತಿರುವುದಾಗಿ ತ್ರಿಸದಸ್ಯ ಪೀಠ ಹೆಳಿದೆ.
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…
ಕಟಪಾಡಿ: ಮಟ್ಟು ಬೀಚ್ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…