Featured

ಅನರ್ಹ ಶಾಸಕರ ಅರ್ಜಿ ವಿಚಾರಣೆ ಬುಧವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್ -Vishwanews24

ನವದೆಹಲಿ:ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಆದೇಶ ಪ್ರಶ್ನಿಸಿ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್​ ಬುಧವಾರಕ್ಕೆ ಮುಂದೂಡಿದೆ.

ಅನರ್ಹ ಶಾಸಕರ ಪರವಾಗಿ ಮುಕುಲ್ ರೊಹಟಗಿ ವಾದ ಮಂಡಿಸಿದ್ದರು. ಕಾಂಗ್ರೆಸ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರು ವಾದ ಮಂಡಿಸಿದರು ಮತ್ತು ಸ್ಪೀಕರ್ ಪರ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.

ಬುಧವಾರದಂದು ಅನರ್ಹ ಶಾಸಕರ ಪರ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಅನರ್ಹ ಶಾಸಕರ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ನಿಗದಿಯಾಗಿರುವ ಉಪಚುನಾವಣೆಯನ್ನು ಮುಂದೂಡುವಂತೆ ಕೋರಿ ಪೀಠಕ್ಕೆ ಅರ್ಜಿ ಸಲ್ಲಿಸುವುದಾಗಿ ಅನರ್ಹ ಶಾಸಕರ ಪರ ವಾದಿಸುತ್ತಿರುವ ವಕೀಲ ಮುಕುಲ್ ರೋಹಟಗಿ ಅವರು ಹೇಳಿದರು. ಹೀಗಾಗಿ ಸುದೀರ್ಘ ವಿಚಾರಣೆಯ ಅಗತ್ಯ ಇರುವುದರಿಂದ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡುತ್ತಿರುವುದಾಗಿ ತ್ರಿಸದಸ್ಯ ಪೀಠ ಹೆಳಿದೆ.

ರಾಜೀನಾಮೆ ಸಲ್ಲಿಸಿದ್ದ ಶಾಸಕರಿಗೆ ಯಾವುದೇ ನೋಟೀಸು ಜಾರಿ ಮಾಡದೆ ಸ್ಪೀಕರ್ ಅವರು ಅನರ್ಹಗೊಳಿಸಿದ್ದಾರೆ. ಒಂದು ವಾರ ಮೊದಲೇ ನೋಟೀಸ್ ನೀಡಿ ವಿಚಾರಣೆ ನಡೆಸಬೇಕು ಎಂಬ ನಿಯಮ ಇದ್ದರು ಈ ಶಾಸಕರ ವಿಚಾರದಲ್ಲಿ ಅದನ್ನು ಪಾಲಿಸಿಲ್ಲ ಎಂದು ರೊಹಟಗಿ ಅವರು ತಮ್ಮ ವಾದವನ್ನು ಮಂಡಿಸಿದರು. ಇನ್ನು ಯಾವುದೇ ಶಾಸಕನ ರಾಜೀನಾಮೆ ವೈಯಕ್ತಿಕ ಮತ್ತು ಸ್ವಯಂಪ್ರೇರಿತವಾಗಿದ್ದಲ್ಲಿ ಅದನ್ನು ಸ್ಪೀಕರ್ ಅವರು ಅಂಗೀಕರಿಸಬೇಕು, ಆದರೂ ಇಲ್ಲಿ ಯಾವುದೇ ವಿಚಾರಣೆ ನಡೆಸದೇ ಶಾಸಕರ ಶಾಸಕತ್ವವನ್ನು ಅನರ್ಹಗೊಳಿಸಲಾಗಿದೆ.

 

Vishwa News 24

Recent Posts

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

33 minutes ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

42 minutes ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

53 minutes ago

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ – vishwanews24

ಕಟಪಾಡಿ: ಮಟ್ಟು ಬೀಚ್‌ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್‌ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…

60 minutes ago

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು : ಸಿಎಂ – vishwanews24

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ   ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…

2 hours ago

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ – vishwanews24

ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…

2 hours ago