ನವದೆಹಲಿ: ಕಾಂಗ್ರೆಸ್-ಜೆಡಿಎಸ್ ನ 17 ಶಾಸಕರನ್ನು ಅನರ್ಹಗೊಳಿಸಿರುವ ಸ್ಪೀಕರ್ ಆದೇಶದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.ಇದರಿಂದ ಅನರ್ಹ ಶಾಸಕರ ಕಾನೂನು ಹೋರಾಟಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.
ಅನರ್ಹ ಶಾಸಕರ ಅರ್ಜಿ ವಿಚಾರಣೆಯಿಂದ ನ್ಯಾ. ಮೋಹನ್ ಶಾಂತನಗೌಡರ್ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಈಗ ಬೇರೆ ನ್ಯಾಯಮೂರ್ತಿಗಳು ಪೀಠಕ್ಕೆ ನೇಮಕವಾಗಬೇಕಾಗಿದೆ.
ಪ್ರಕರಣದ ತುರ್ತು ವಿಚಾರಣೆ ಕೋರಿ ಅನರ್ಹರ ಪರ ವಕೀಲರು ಈ ಹಿಂದೆ ಮೂರು ಬಾರಿ ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿದ್ದ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠ ಇದೀಗ ಮತ್ತೊಮ್ಮೆ ಅನರ್ಹ ಶಾಸಕರ ವಿಚಾರಣೆಯನ್ನು ಮುಂದೂಡಿದೆ. ಇನ್ನು ಪ್ರಕರಣದ ವಿಚಾರಣೆಯಿಂದ ನ್ಯಾ. ಶಾಂತನಗೌಡರು ಹಿಂದೆ ಸರಿದಿದ್ದಾರೆ. ಹೀಗಾಗಿ ಮತ್ತೆ ಮುಖ್ಯ ನ್ಯಾಯಾಧೀಶರು ಈ ಪೀಠಕ್ಕೆ ಮತ್ತೊಬ್ಬ ನ್ಯಾಯಾಧೀಶರನ್ನು ನೇಮಕ ಮಾಡುವ ಅವಶ್ಯಕತೆ ಇದೆ. ಅಲ್ಲಿ ತನಕ ಅನರ್ಹ ಶಾಸಕರ ಎದೆ ಬಡಿತ ಹೆಚ್ಚಾಗಿ ಇರುತ್ತದೆ.
ಡಿವೈಡರ್ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…