ಬೆಂಗಳೂರು: ಅನರ್ಹ ಶಾಸಕರ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.
ಸ್ಪೀಕರ್ ಆದೇಶ ಪ್ರಶ್ನಿಸಿ 17 ಜನ ಅನರ್ಹ ಶಾಸಕರು ಮೇಲ್ಮನವಿ ಸಲ್ಲಿಸಿದ್ದರು. ಅನರ್ಹ ಶಾಸಕರ ಪರ ಹಿರಿಯ ವಕೀಲ ವಿ.ಗಿರಿ ಅವರು ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು, ರಿಜಿಸ್ಟ್ರಾರ್ ಅವರಿಗೆ ಪ್ರಕರಣವನ್ನು ಲಿಸ್ಟ್ ಮಾಡುವಂತೆ ಸೂಚಿಸಿತು.
ಈ ಹಿಂದೆಯೂ ಒಮ್ಮೆ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ಪೀಠದೆದುರು ಅನರ್ಹರ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಮನವಿ ಸಲ್ಲಿಸಿದ್ದರು. ಆದರೆ, ರಿಜಿಸ್ಟ್ರಾರ್ರಿಂದಲೇ ವಿಚಾರಣೆಗೆ ಲಿಸ್ಟ್ ಆಗಲಿ ಎಂದು ಪೀಠ ತಿಳಿಸಿತ್ತು.
ಅನರ್ಹಗೊಂಡಿರುವ ಶಾಸಕರು ಯಾವುದೇ ಸಾಂವಿಧಾನಿಕ ಹುದ್ದೆ ಅಲಂಕರಿಸುವಂತಿಲ್ಲ ಹಾಗೂ 15ನೇ ವಿಧಾನಸಭೆ ಅವಧಿ (2023 ರವರೆಗೆ) ಮುಗಿಯುವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಹಿಂದಿನ ಸಭಾಧ್ಯಕ್ಷ ಕೆ.ಆರ್. ರಮೇಶ್ ಕುಮಾರ್ ತೀರ್ಪು ನೀಡಿದ್ದರು.
ಜುಲೈ 26 ಹಾಗೂ ಆಗಸ್ಟ್ 1 ರಂದು ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ 17 ಜನ ಅನರ್ಹ ಶಾಸಕರು ಅರ್ಜಿ ಸಲ್ಲಿಸಿದ್ದರು.
ಮೇ 16ರಂದು ಇತಿಹಾಸ ಪ್ರಸಿದ್ದ ಕಾಪು "ಪಿಲಿಕೋಲ" ಕಾಪು: ತನ್ನದೇ ಆದ ವಿಶಿಷ್ಟ- ವೈಶಿಷ್ಟ್ಯತೆಗಳಿಂದಾಗಿ ಕರಾವಳಿ ಜಿಲ್ಲೆಗಳು ಮಾತ್ರವಲ್ಲದೇ ದೇಶ-ವಿದೇಶಗಳಲ್ಲಿಯೂ…
ಕಾಪು ಅಕ್ರಮ ಮೀನುಗಾರಿಕೆ ನಡೆಸುತ್ತಿದ್ದ ದೋಣಿ ಸ್ಥಳೀಯ ನಾಡದೋಣಿ ಗೆ ಡಿಕ್ಕಿ ಪ್ರಕರಣ: ಎಸ್ ಡಿ ಪಿ ಐ ಖಂಡನೆ…
ಕಾರ್ಕಳ : ಮಹಾಮಸ್ತಕಾಭಿಷೇಕಕ್ಕೆ 1.59 ಕೋಟಿ ರೂಪಾಯಿ ಅನುದಾನ: ರಾಜ್ಯ ಸರ್ಕಾರಕ್ಕೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಕೆ ಕಾರ್ಕಳದಲ್ಲಿ…
ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ ಡೀಸೆಲ್ ಪೂರೈಕೆಗೆ ಕೇಂದ್ರ ಸಚಿವರಿಗೆ ಮನವಿ ಉಡುಪಿ: ಮೀನುಗಾರಿಕ ದೋಣಿಗಳಿಗೆ ಅಗತ್ಯ ಪ್ರಮಾಣದ…
ಕಟಪಾಡಿ ಅಂಡರ್ಪಾಸ್ ವಾರದೊಳಗೆ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿ: ರಾ. ಹೆ. 66ರ ಕಟಪಾಡಿ ಜಂಕ್ಷನ್ನಲ್ಲಿ ಅಂಡರ್ಪಾಸ್ ಮತ್ತು ವೆಹಿಕಲ್…
ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ ಬೊಳ್ಜೆ ಉದ್ಯಾವರ : ಅಧ್ಯಕ್ಷರಾಗಿ ಪ್ರಕಾಶ್ ಟಿ. ಕೋಟ್ಯಾನ್ ಆಯ್ಕೆ ಉಡುಪಿ…