Featured

ಅನರ್ಹ ಶಾಸಕರ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸಮ್ಮತಿ -Vishwanews24

ಬೆಂಗಳೂರು: ಅನರ್ಹ ಶಾಸಕರ ಮೇಲ್ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ.

ಸ್ಪೀಕರ್ ಆದೇಶ ಪ್ರಶ್ನಿಸಿ 17 ಜನ ಅನರ್ಹ ಶಾಸಕರು ಮೇಲ್ಮನವಿ ಸಲ್ಲಿಸಿದ್ದರು. ಅನರ್ಹ ಶಾಸಕರ ‌ಪರ‌ ಹಿರಿಯ ವಕೀಲ ವಿ.ಗಿರಿ ಅವರು ತ್ವರಿತ ವಿಚಾರಣೆ ಕೋರಿ ಮಾಡಿಕೊಂಡ ಮನವಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು, ರಿಜಿಸ್ಟ್ರಾರ್‌ ಅವರಿಗೆ ಪ್ರಕರಣವನ್ನು ಲಿಸ್ಟ್ ಮಾಡುವಂತೆ ಸೂಚಿಸಿತು.

ಈ‌ ಹಿಂದೆಯೂ ಒಮ್ಮೆ ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್‌ ಪೀಠದೆದುರು ಅನರ್ಹರ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಮನವಿ ಸಲ್ಲಿಸಿದ್ದರು. ಆದರೆ, ರಿಜಿಸ್ಟ್ರಾರ್‌ರಿಂದಲೇ ವಿಚಾರಣೆಗೆ ಲಿಸ್ಟ್ ಆಗಲಿ ಎಂದು ಪೀಠ ತಿಳಿಸಿತ್ತು.

ಅನರ್ಹಗೊಂಡಿರುವ ಶಾಸಕರು ಯಾವುದೇ ಸಾಂವಿಧಾನಿಕ ಹುದ್ದೆ ಅಲಂಕರಿಸುವಂತಿಲ್ಲ ಹಾಗೂ 15ನೇ ವಿಧಾನಸಭೆ ಅವಧಿ (2023 ರವರೆಗೆ) ಮುಗಿಯುವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಹಿಂದಿನ ಸಭಾಧ್ಯಕ್ಷ ಕೆ.ಆರ್. ರಮೇಶ್‌ ಕುಮಾರ್ ತೀರ್ಪು ನೀಡಿದ್ದರು.

ಜುಲೈ 26 ಹಾಗೂ ಆಗಸ್ಟ್‌ 1 ರಂದು ಅನರ್ಹತೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ 17 ಜನ ಅನರ್ಹ ಶಾಸಕರು ಅರ್ಜಿ ಸಲ್ಲಿಸಿದ್ದ‌ರು.

Vishwa News 24

Recent Posts

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ – vishwanews24

ಉಡುಪಿ : ಭಾರತ್ ಜೋಡೋ ಯುವ ಸಂಘಗಳ ನೋಂದಣಿಗೆ ಅರ್ಜಿ ಆಹ್ವಾನ  ಉಡುಪಿ : ರಾಜ್ಯ ಸರ್ಕಾರದ ಆದೇಶದಂತೆ ಕುಂದಾಪುರ…

2 minutes ago

ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ – vishwanews24

 ಉಡುಪಿ : ಆ. 28ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ   ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ…

5 minutes ago

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು -vishwanews24

ಮಲ್ಪೆ : ಆಳಸಮುದ್ರದಲ್ಲಿ ಭಾರೀ ಗಾಳಿ: ಮೀನುಗಾರಿಕೆಗೆ ತೆರಳದ ಪರ್ಸೀನ್ ಬೋಟುಗಳು ಮಲ್ಪೆ: ಕಳೆದ ಎರಡು ದಿನಗಳಿಂದ ಆಳಸಮುದ್ರದಲ್ಲಿ ಭಾರೀ…

19 hours ago

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ -vishwanews24

ಸೆ.7ರೊಳಗೆ ಕರಾವಳಿ – ಮಲೆನಾಡು ಪ್ರವಾಸೋದ್ಯಮ ನೀತಿಯ ಕರಡು ಸಿದ್ಧ: ಕೆ.ಜೆ. ಜಾರ್ಜ್‌ ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು…

21 hours ago

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು -vishwanews24

ಮಂಗಳೂರು: ವಂದೇ ಭಾರತ್ ಎಕ್ಸ್‌ಪ್ರೆಸ್ ಅಡುಗೆ ಸೇವಾ ಘಟಕವನ್ನು ಪರಿಶೀಲಿಸಿದ ಆಹಾರ ಸುರಕ್ಷತಾ ಅಧಿಕಾರಿಗಳು ಮಂಗಳೂರು : ಮಂಗಳೂರು ಸೆಂಟ್ರಲ್…

23 hours ago

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

1 day ago