Featured

ಅನರ್ಹ ಶಾಸಕರ 17 ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ -Vishwanews24

ಬೆಂಗಳೂರು : ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರಗಳಿಗೆ ಇದೀಗ ಕೈ ನಿಂದ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಮುಖಂಡರ ನೇತೃತ್ವದ ವೀಕ್ಷಕರನ್ನು ರಚಿಸಿದೆ..

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಶಾಕ್ ಕೊಟ್ಟಿದ್ದ ಅನರ್ಹ ಶಾಸಕರಿಗೆ, ಇದೀಗ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದೆ. ಕಾಂಗ್ರೆಸ್, ಜೆಡಿಎಸ್ ನ ಅನರ್ಹಗೊಂಡ ಶಾಸಕರ 17 ಕ್ಷೇತ್ರಗಳಲ್ಲೂ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಮುಖಂಡರ ನೇತೃತ್ವದ ತಂಡವನ್ನು ಕೈ ರಚಿಸಿದೆ.

ಈ ಕುರಿತು ಚರ್ಚೆ ನಡೆಸಿದ ಕಾಂಗ್ರೆಸ್ ನ ರಾಜ್ಯದ ಹಿರಿಯ ನಾಯಕರು, 17 ಅನರ್ಹ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆಗೆ ಪೂರ್ವವಾಗಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಬಳಿಕ 17 ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಉಸ್ತುವಾರಿಗಳನ್ನು ನೇಮಕ ಮಾಡಲು ತೀರ್ಮಾನಿಸಿದೆ. ಅದರಂತೆ ಈ ಕೆಳಗಿನ ನಾಯಕರಿಗೆ ಆಯಾ ಕ್ಷೇತ್ರದ ಉಸ್ತುವಾರಿಯ ಜವಾಬ್ದಾರಿಯನ್ನು ಹೊರಿಸಿದೆ.

ಆರ್. ಆರ್ ನಗರಕ್ಕೆ ಸಂಸದ ಡಿ.ಕೆ ಸುರೇಶ್, ಕೆ.ಆರ್ ಪುರಂ ಕ್ಷೇತ್ರಕ್ಕೆ ಕೆ.ಜೆ ಜಾರ್ಜ್, ಯಶವಂತಪುರ ಕ್ಷೇತ್ರಕ್ಕೆ ಎಂ.ಕೃಷ್ಣಪ್ಪ ಮತ್ತು ಜಮೀರ್ ಅಹ್ಮದ್ ಖಾನ್,  ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಕ್ಕೆ ಮಾಗಡಿ ಬಾಲಕೃಷ್ಣ,  ಕೆ.ಆರ್ ಪೇಟೆ ಕ್ಷೇತ್ರಕ್ಕೆ ಚಲುವರಾಯಸ್ವಾಮಿ, ಹುಣಸೂರು ಕ್ಷೇತ್ರಕ್ಕೆ ಮಾಜಿ ಸಚಿವ ಮಹದೇವಪ್ಪರನ್ನ ನೇಮಕ ಮಾಡಿದೆ.

ಹಾಗೆಯೇ ರಾಣಿಬೆನ್ನೂರು ಕ್ಷೇಥ್ರಕ್ಕೆ ಹೆಚ್ಎಂ ರೇವಣ್ಣ, ಗೋಕಾಕ್ ಗೆ ಶೀವಾನಂದ ಪಾಟೀಲ್, ಹೊಸಕೋಟೆ ಕೃಷ್ಣೇಭೈರೇಗೌಡ, ಮಸ್ಕಿ ಈಶ್ವರ್ ಖಂಡ್ರೆ, ಹಿರೇಕೆರೂರುಗೆ ಹೆಚ್.ಕೆ ಪಾಟೀಲ್,  ಅಥಣಿ ಕ್ಷೇತ್ರಕ್ಕೆ ಎಂ.ಬಿ ಪಾಟೀಲ್, ಕಾಗವಾಡ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಅವರನ್ನ ಕಾಂಗ್ರೆಸ್ ನೇಮಕ ಮಾಡಿದೆ.

ಇನ್ನುಳಿದ ಕ್ಷೇತ್ರಗಳಿಗೂ ಸದ್ಯದಲ್ಲಿಯೇ ವೀಕ್ಷಕರನ್ನು ನೇಮಿಸಲಿರುವ ಕಾಂಗ್ರೆಸ್, ಈ ನಾಯಕರು ಆಯಾ ಜವಾಬ್ದಾರಿ ವಹಿಸಿದ ಕ್ಷೇತ್ರಗಳಿಗೆ ತೆರಳಿ, ಕಾರ್ಯಕರ್ತರ ಜೊತೆಗೆ ಅಲ್ಲಿನ ಸ್ಥಳೀಯ ಮುಖಂಡರ ಜೊತೆಗೆ ಸಭೆ ನಡೆಸಿ, ಚರ್ಚೆ ನಡೆಸಿ, ಪಕ್ಷ ಬಲವರ್ಧನೆಗೆ ಪ್ರಯತ್ನ ನಡೆಸಲಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago