Featured

ಅನರ್ಹ ಶಾಸಕರ 17 ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ವೀಕ್ಷಕರ ನೇಮಕ -Vishwanews24

ಬೆಂಗಳೂರು : ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಕ್ಷೇತ್ರಗಳಿಗೆ ಇದೀಗ ಕೈ ನಿಂದ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಮುಖಂಡರ ನೇತೃತ್ವದ ವೀಕ್ಷಕರನ್ನು ರಚಿಸಿದೆ..

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ, ಶಾಕ್ ಕೊಟ್ಟಿದ್ದ ಅನರ್ಹ ಶಾಸಕರಿಗೆ, ಇದೀಗ ಕಾಂಗ್ರೆಸ್ ಮತ್ತೊಂದು ಶಾಕ್ ನೀಡಿದೆ. ಕಾಂಗ್ರೆಸ್, ಜೆಡಿಎಸ್ ನ ಅನರ್ಹಗೊಂಡ ಶಾಸಕರ 17 ಕ್ಷೇತ್ರಗಳಲ್ಲೂ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಹಿರಿಯ ಮುಖಂಡರ ನೇತೃತ್ವದ ತಂಡವನ್ನು ಕೈ ರಚಿಸಿದೆ.

ಈ ಕುರಿತು ಚರ್ಚೆ ನಡೆಸಿದ ಕಾಂಗ್ರೆಸ್ ನ ರಾಜ್ಯದ ಹಿರಿಯ ನಾಯಕರು, 17 ಅನರ್ಹ ಶಾಸಕರ ಕ್ಷೇತ್ರದಲ್ಲಿ ಉಪಚುನಾವಣೆಗೆ ಪೂರ್ವವಾಗಿ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಈ ಬಳಿಕ 17 ಅನರ್ಹ ಶಾಸಕರ ಕ್ಷೇತ್ರಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಉಸ್ತುವಾರಿಗಳನ್ನು ನೇಮಕ ಮಾಡಲು ತೀರ್ಮಾನಿಸಿದೆ. ಅದರಂತೆ ಈ ಕೆಳಗಿನ ನಾಯಕರಿಗೆ ಆಯಾ ಕ್ಷೇತ್ರದ ಉಸ್ತುವಾರಿಯ ಜವಾಬ್ದಾರಿಯನ್ನು ಹೊರಿಸಿದೆ.

ಆರ್. ಆರ್ ನಗರಕ್ಕೆ ಸಂಸದ ಡಿ.ಕೆ ಸುರೇಶ್, ಕೆ.ಆರ್ ಪುರಂ ಕ್ಷೇತ್ರಕ್ಕೆ ಕೆ.ಜೆ ಜಾರ್ಜ್, ಯಶವಂತಪುರ ಕ್ಷೇತ್ರಕ್ಕೆ ಎಂ.ಕೃಷ್ಣಪ್ಪ ಮತ್ತು ಜಮೀರ್ ಅಹ್ಮದ್ ಖಾನ್,  ಮಹಾಲಕ್ಷ್ಮಿ ಲೇಔಟ್ ಕ್ಷೇತ್ರಕ್ಕೆ ಮಾಗಡಿ ಬಾಲಕೃಷ್ಣ,  ಕೆ.ಆರ್ ಪೇಟೆ ಕ್ಷೇತ್ರಕ್ಕೆ ಚಲುವರಾಯಸ್ವಾಮಿ, ಹುಣಸೂರು ಕ್ಷೇತ್ರಕ್ಕೆ ಮಾಜಿ ಸಚಿವ ಮಹದೇವಪ್ಪರನ್ನ ನೇಮಕ ಮಾಡಿದೆ.

ಹಾಗೆಯೇ ರಾಣಿಬೆನ್ನೂರು ಕ್ಷೇಥ್ರಕ್ಕೆ ಹೆಚ್ಎಂ ರೇವಣ್ಣ, ಗೋಕಾಕ್ ಗೆ ಶೀವಾನಂದ ಪಾಟೀಲ್, ಹೊಸಕೋಟೆ ಕೃಷ್ಣೇಭೈರೇಗೌಡ, ಮಸ್ಕಿ ಈಶ್ವರ್ ಖಂಡ್ರೆ, ಹಿರೇಕೆರೂರುಗೆ ಹೆಚ್.ಕೆ ಪಾಟೀಲ್,  ಅಥಣಿ ಕ್ಷೇತ್ರಕ್ಕೆ ಎಂ.ಬಿ ಪಾಟೀಲ್, ಕಾಗವಾಡ ಕ್ಷೇತ್ರಕ್ಕೆ ಸತೀಶ್ ಜಾರಕಿಹೊಳಿ ಅವರನ್ನ ಕಾಂಗ್ರೆಸ್ ನೇಮಕ ಮಾಡಿದೆ.

ಇನ್ನುಳಿದ ಕ್ಷೇತ್ರಗಳಿಗೂ ಸದ್ಯದಲ್ಲಿಯೇ ವೀಕ್ಷಕರನ್ನು ನೇಮಿಸಲಿರುವ ಕಾಂಗ್ರೆಸ್, ಈ ನಾಯಕರು ಆಯಾ ಜವಾಬ್ದಾರಿ ವಹಿಸಿದ ಕ್ಷೇತ್ರಗಳಿಗೆ ತೆರಳಿ, ಕಾರ್ಯಕರ್ತರ ಜೊತೆಗೆ ಅಲ್ಲಿನ ಸ್ಥಳೀಯ ಮುಖಂಡರ ಜೊತೆಗೆ ಸಭೆ ನಡೆಸಿ, ಚರ್ಚೆ ನಡೆಸಿ, ಪಕ್ಷ ಬಲವರ್ಧನೆಗೆ ಪ್ರಯತ್ನ ನಡೆಸಲಿದ್ದಾರೆ.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

8 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

8 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

9 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

10 hours ago