Featured

ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ : ಜೆಡಿಎಸ್ ವ್ಯಂಗ್ಯ – VIshwanews24

  • ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ .. : ಜೆಡಿಎಸ್ ಆರೋಪ

  • ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ .. : ಜೆಡಿಎಸ್ ವ್ಯಂಗ್ಯ

  • ಮಾಡುವುದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ.. – VIshwanews24

ಬೆಂಗಳೂರು: ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್‌ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಜೆಡಿಎಸ್, ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ. ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು ಎಂದು ಟೀಕೆ ಮಾಡಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

ಕುಮಾರಸ್ವಾಮಿ ಅವರು ಆರ್ ಎಸ್‌ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯುಪಿಎಸ್ ಸಿ ಗೆ ಸಮೀಕರಣ ಮಾಡಿ ಕೆಪಿಎಸ್ ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆಪಿಎಸ್ ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಕುಮಾರಸ್ವಾಮಿ ಅವರೆಂದೂ ಕೆಪಿಎಸ್ ಸಿಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು. ಕೆಪಿಎಸ್ ಸಿಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆಪಿಎಸ್ ಸಿ ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡುವುದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

Vishwa News 24

Recent Posts

ಉಡುಪಿ: ಕಾಕ್ರೋಚ್ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ – vishwanews24

ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ  ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…

8 hours ago

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ – vishwanews24

ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…

8 hours ago

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ – vishwanews24

ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್‌ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್‌ನಲ್ಲಿ ಕಿದಿಯೂರು ಕ್ರೆಡಿಟ್…

10 hours ago

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ – vishwanews24

ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…

10 hours ago

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ – vishwanews24

ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…

10 hours ago

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ – vishwanews24

ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…

11 hours ago