Featured

ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ : ಜೆಡಿಎಸ್ ವ್ಯಂಗ್ಯ – VIshwanews24

  • ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ .. : ಜೆಡಿಎಸ್ ಆರೋಪ

  • ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ .. : ಜೆಡಿಎಸ್ ವ್ಯಂಗ್ಯ

  • ಮಾಡುವುದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ.. – VIshwanews24

ಬೆಂಗಳೂರು: ಸ್ವಯಂ ಘೋಷಿತ ಸೇವಾ ಸಂಸ್ಥೆ ಅರ್ ಎಸ್‌ಎಸ್ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಎತ್ತಿದ ಪ್ರಶ್ನೆಗಳಿಗೆ ಉತ್ತರ ಹೇಳುವ ಬದಲು ಸತ್ಯವ್ನನು ದಾಟಿಸುವ ಹುನ್ನಾರದೊಂದಿಗೆ ಬಿಜೆಪಿಯು ದಾಸರ ಪದಗಳನ್ನು ಹೇಳುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿದ ಜೆಡಿಎಸ್, ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ. ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಠಿಸಿದ ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು ಎಂದು ಟೀಕೆ ಮಾಡಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

ಕುಮಾರಸ್ವಾಮಿ ಅವರು ಆರ್ ಎಸ್‌ಎಸ್ ತರಬೇತಿ ನೀಡಿದ ಅಧಿಕಾರಿಗಳ ಬಗ್ಗೆ ಹೇಳಿದ್ದರೆ, ನೀವು ಯುಪಿಎಸ್ ಸಿ ಗೆ ಸಮೀಕರಣ ಮಾಡಿ ಕೆಪಿಎಸ್ ಸಿ ಬಗ್ಗೆ ಎಗ್ಗಿಲ್ಲದೆ ಸುಳ್ಳು ಹೇಳುತ್ತಿದ್ದೀರಿ. ಸಾಂವಿಧಾನಿಕ ಸಂಸ್ಥೆಗಳನ್ನು ಗುಲಾಮರಂತೆ ಮಾಡಿಕೊಂಡಿರುವ ನಿಮಗೆ ಕೆಪಿಎಸ್ ಸಿ ಬಗ್ಗೆ ಮಾತನಾಡುವ ನೈತಿಕತೆ ಇದೆಯಾ? ಕುಮಾರಸ್ವಾಮಿ ಅವರೆಂದೂ ಕೆಪಿಎಸ್ ಸಿಯನ್ನು ದುರುಪಯೋಗ ಮಾಡಿಕೊಂಡಿಲ್ಲ. 2011ರಲ್ಲಿ ಪಾಸಾಗಿ ಅನ್ಯಾಯಕ್ಕೆ ಒಳಗಾದ ಹಳ್ಳಿ ರೈತರ ಮಕ್ಕಳ ಪರ ಹೋರಾಟ ನಡೆಸಿದ್ದಾರೆ. ನಿಮ್ಮ ಹಾಗೆ ಗರ್ಭಗುಡಿ ಸಂಸ್ಕೃತಿ ಅವರದಲ್ಲ. ಮನೆ ಬಾಗಿಲಿಗೆ ಬಂದು ಸಹಾಯ ಕೇಳುವ ಯಾರನ್ನೂ ಸೊಕ್ಕಿನಿಂದ ಆಚೆಗಟ್ಟಿದವರಲ್ಲ. ನಿಮಗೆ ಆ ಮಾನವೀಯತೆ ಹೇಗೆ ಗೊತ್ತಾಗಬೇಕು. ಕೆಪಿಎಸ್ ಸಿಯನ್ನು ಹಾಳು ಮಾಡಿದ್ದು ಯಾರು? ಇದೇ ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು. ಬಿಡಿಎಯಲ್ಲಿ ತಿಂದು ತೇಗಿದವರನ್ನು ಕೆಪಿಎಸ್ ಸಿ ಗೆ ತಂದು ಕೂರಿಸಿದ್ದು ಯಾರೆಂಬುದು ಗೊತ್ತಿಲ್ಲವೆ? ಮಾಡುವುದು ಅನಾಚಾರ, ಮನೆ ಮುಂದೆ ಬೃಂದಾವನ ಎನ್ನುವ ಹಾಗಿದೆ ಬಿಜೆಪಿ ವರಸೆ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

6 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

7 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

7 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

8 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

9 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

9 hours ago