Featured

ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ : ಹೆಚ್. ಡಿ ಕುಮಾರಸ್ವಾಮಿ – Vishwanews24

ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ – ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು: “ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ” ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭವಾನಿಗೆ ಟಿಕೆಟ್ ಕೊಡುವುದಾದರೆ ನನಗೆ ಕೂಡ ನೀಡಬೇಕೆಂದು ಅನಿತಾ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ ಎಂದು ವರದಿಗಳು ಬರುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಎಚ್‌‌ಡಿಕೆ, “ನಮ್ಮ ಕುಟುಂಬದಲ್ಲಿ ಅನಿತಾ ಕುಮಾರಸ್ವಾಮಿಯವರನ್ನು ಎರಡು ಮೂರು ಬಾರಿ ಪಕ್ಷದ ಅಭ್ಯರ್ಥಿ ಇಲ್ಲದೇ ಇದ್ದಾಗ ನಿಲ್ಲಿಸಲಾಗಿತ್ತಷ್ಟೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಕಾರ್ಯಕರ್ತರು ಮತ್ತು ದೇವೇಗೌಡರ ಸೂಚನೆ ಒತ್ತಡ ಮೇರೆಗೆ ಅನಿತಾ ಚುನಾವಣೆಗೆ ನಿಂತು ಗೆದ್ದರು. ಇನ್ನು ಮುಂದೆ ಅಭ್ಯರ್ಥಿಯಾಗಲು ಅವರಿಗೆ ಒಲವು ಇಲ್ಲ. ಚುನಾವಣಾ ರಾಜಕೀಯದಿಂದ ದೂರವುಳಿದಿದ್ದಾರೆ” ಎಂದರು.

ಇನ್ನು “ಹಾಸನ ಜಿಲ್ಲೆ ರಾಜಕಾರಣ ಬೇರೆ, ನನ್ನ ಹೆಂಡತಿ ರಾಜಕಾರಣ ಬೇರೆ, ಸೊಸೆಯಂದಿರ ಮಧ್ಯೆ ಹೊಡೆದಾಟ ಇಲ್ಲ, ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಹಾಗಾಗಿ ಆ ಕೆಟಗರಿಕೆ ಇಲ್ಲಿಯದನ್ನು ಸೇರಿಸಬೇಕಾಗಿಲ್ಲ. ನನ್ನ ಕುಟುಂಬವನ್ನು ಅನಿತಾ ಕುಮಾರಸ್ವಾಮಿಯನ್ನು ಮಧ್ಯೆ ತರಬೇಡಿ, ಅವರು ಗೌರವಯುತವಾಗಿ ಕುಟುಂಬದ ಮರ್ಯಾದೆ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

17 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

17 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago