ಬೆಂಗಳೂರು: “ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ” ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಭವಾನಿಗೆ ಟಿಕೆಟ್ ಕೊಡುವುದಾದರೆ ನನಗೆ ಕೂಡ ನೀಡಬೇಕೆಂದು ಅನಿತಾ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ ಎಂದು ವರದಿಗಳು ಬರುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಎಚ್ಡಿಕೆ, “ನಮ್ಮ ಕುಟುಂಬದಲ್ಲಿ ಅನಿತಾ ಕುಮಾರಸ್ವಾಮಿಯವರನ್ನು ಎರಡು ಮೂರು ಬಾರಿ ಪಕ್ಷದ ಅಭ್ಯರ್ಥಿ ಇಲ್ಲದೇ ಇದ್ದಾಗ ನಿಲ್ಲಿಸಲಾಗಿತ್ತಷ್ಟೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಕಾರ್ಯಕರ್ತರು ಮತ್ತು ದೇವೇಗೌಡರ ಸೂಚನೆ ಒತ್ತಡ ಮೇರೆಗೆ ಅನಿತಾ ಚುನಾವಣೆಗೆ ನಿಂತು ಗೆದ್ದರು. ಇನ್ನು ಮುಂದೆ ಅಭ್ಯರ್ಥಿಯಾಗಲು ಅವರಿಗೆ ಒಲವು ಇಲ್ಲ. ಚುನಾವಣಾ ರಾಜಕೀಯದಿಂದ ದೂರವುಳಿದಿದ್ದಾರೆ” ಎಂದರು.
ಇನ್ನು “ಹಾಸನ ಜಿಲ್ಲೆ ರಾಜಕಾರಣ ಬೇರೆ, ನನ್ನ ಹೆಂಡತಿ ರಾಜಕಾರಣ ಬೇರೆ, ಸೊಸೆಯಂದಿರ ಮಧ್ಯೆ ಹೊಡೆದಾಟ ಇಲ್ಲ, ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಹಾಗಾಗಿ ಆ ಕೆಟಗರಿಕೆ ಇಲ್ಲಿಯದನ್ನು ಸೇರಿಸಬೇಕಾಗಿಲ್ಲ. ನನ್ನ ಕುಟುಂಬವನ್ನು ಅನಿತಾ ಕುಮಾರಸ್ವಾಮಿಯನ್ನು ಮಧ್ಯೆ ತರಬೇಡಿ, ಅವರು ಗೌರವಯುತವಾಗಿ ಕುಟುಂಬದ ಮರ್ಯಾದೆ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…