Featured

ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ : ಹೆಚ್. ಡಿ ಕುಮಾರಸ್ವಾಮಿ – Vishwanews24

ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ – ಹೆಚ್. ಡಿ ಕುಮಾರಸ್ವಾಮಿ

ಬೆಂಗಳೂರು: “ಅನಿತಾ ಕುಮಾರಸ್ವಾಮಿ ಅವರು ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಪಕ್ಷದ ಅಭ್ಯರ್ಥಿ ಇಲ್ಲದಿದ್ದಾಗ ಪಕ್ಷದ ಗೌರವ ಉಳಿಸಲು ಅವರನ್ನು ಕರೆದುಕೊಂಡು ಬಂದು ನಿಲ್ಲಿಸಿದೆವು, ನಾವೇ ಅವರನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿದ್ದೇವೆ ಹೊರತು ಅವರಿಗೆ ಸ್ವಂತ ಆಸಕ್ತಿಯಿರಲಿಲ್ಲ” ಎಂದು ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭವಾನಿಗೆ ಟಿಕೆಟ್ ಕೊಡುವುದಾದರೆ ನನಗೆ ಕೂಡ ನೀಡಬೇಕೆಂದು ಅನಿತಾ ಕುಮಾರಸ್ವಾಮಿ ಪಟ್ಟು ಹಿಡಿದಿದ್ದಾರೆ ಎಂದು ವರದಿಗಳು ಬರುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಎಚ್‌‌ಡಿಕೆ, “ನಮ್ಮ ಕುಟುಂಬದಲ್ಲಿ ಅನಿತಾ ಕುಮಾರಸ್ವಾಮಿಯವರನ್ನು ಎರಡು ಮೂರು ಬಾರಿ ಪಕ್ಷದ ಅಭ್ಯರ್ಥಿ ಇಲ್ಲದೇ ಇದ್ದಾಗ ನಿಲ್ಲಿಸಲಾಗಿತ್ತಷ್ಟೆ ಹೊರತು ಅವರಿಗೆ ಆಸಕ್ತಿಯಿರಲಿಲ್ಲ. ಕಾರ್ಯಕರ್ತರು ಮತ್ತು ದೇವೇಗೌಡರ ಸೂಚನೆ ಒತ್ತಡ ಮೇರೆಗೆ ಅನಿತಾ ಚುನಾವಣೆಗೆ ನಿಂತು ಗೆದ್ದರು. ಇನ್ನು ಮುಂದೆ ಅಭ್ಯರ್ಥಿಯಾಗಲು ಅವರಿಗೆ ಒಲವು ಇಲ್ಲ. ಚುನಾವಣಾ ರಾಜಕೀಯದಿಂದ ದೂರವುಳಿದಿದ್ದಾರೆ” ಎಂದರು.

ಇನ್ನು “ಹಾಸನ ಜಿಲ್ಲೆ ರಾಜಕಾರಣ ಬೇರೆ, ನನ್ನ ಹೆಂಡತಿ ರಾಜಕಾರಣ ಬೇರೆ, ಸೊಸೆಯಂದಿರ ಮಧ್ಯೆ ಹೊಡೆದಾಟ ಇಲ್ಲ, ನನ್ನ ಹೆಂಡತಿ ರಾಜಕೀಯಕ್ಕೆ ಬಂದಿದ್ದು ಪಕ್ಷ ಉಳಿಸಲಿಕ್ಕೆ. ಹಾಗಾಗಿ ಆ ಕೆಟಗರಿಕೆ ಇಲ್ಲಿಯದನ್ನು ಸೇರಿಸಬೇಕಾಗಿಲ್ಲ. ನನ್ನ ಕುಟುಂಬವನ್ನು ಅನಿತಾ ಕುಮಾರಸ್ವಾಮಿಯನ್ನು ಮಧ್ಯೆ ತರಬೇಡಿ, ಅವರು ಗೌರವಯುತವಾಗಿ ಕುಟುಂಬದ ಮರ್ಯಾದೆ ಉಳಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago