Featured

ಅನಿವಾರ್ಯವಾದರೆ ಶೀಘ್ರವೇ ಮತ್ತೊಂದು ಪ್ಯಾಕೇಜ್‌ ಘೋಷಣೆ – Vishwanews24

ಅನಿವಾರ್ಯವಾದರೆ ಶೀಘ್ರವೇ ಮತ್ತೊಂದು ಪ್ಯಾಕೇಜ್‌ ಘೋಷಣೆ – Vishwanews24

ಇನ್ನೊಂದು ವಾರದಲ್ಲಿ ಪಾಸಿಟಿವಿಟಿ ರೇಟ್‌ ಶೇ.5ಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ..

ಶಿವಮೊಗ್ಗ: ಕೊರೊನಾ ಪಾಸಿಟಿವಿಟಿ ರೇಟ್‌ ಕನಿಷ್ಠ ಶೇ.5ಕ್ಕೆ ಬರಬೇಕು ಎಂಬುದು ನಮ್ಮ ಅಪೇಕ್ಷೆ. ಹೀಗಾಗಿಯೇ ಎಲ್ಲಿ ಸೋಂಕು ಹೆಚ್ಚಿದೆಯೋ ಅಲ್ಲಿ ಲಾಕ್‌ಡೌನ್‌ ಮುಂದುವರಿಸಲಾಗಿದೆ. ಅನಿವಾರ್ಯವಾದರೆ ಶೀಘ್ರವೇ ಮತ್ತೊಂದು ಪ್ಯಾಕೇಜ್‌ ಘೋಷಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗ, ಶಿಕಾರಿಪುರ ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೋವಿಡ್‌ ಹೆಚ್ಚಿನ ಪ್ರಮಾಣದಲ್ಲಿದೆ. ಅದನ್ನು ನಿಯಂತ್ರಿಸಲು ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಲಾಕ್‌ಡೌನ್‌ ಇನ್ನೂ ಒಂದು ವಾರ ವಿಸ್ತರಿಸಿರುವುದರಿಂದ ಸೋಂಕು ಹತೋಟಿಗೆ ಬರುವ ವಿಶ್ವಾಸ ಇದೆ ಎಂದರು.

ಇನ್ನೊಂದು ವಾರದಲ್ಲಿ ಪಾಸಿಟಿವಿಟಿ ರೇಟ್‌ ಶೇ.5ಕ್ಕೆ ಬರುತ್ತದೆ ಎಂಬ ವಿಶ್ವಾಸ ಇದೆ. ಆದರೆ ಇದಕ್ಕೆ ಜನ ಸಹಕಾರ ಕೊಡಬೇಕು. ಕಳೆದ ಎಂಟು ತಿಂಗಳಿಂದ ಆದಾಯ ಕುಸಿತವಾಗಿದೆ. ತೆರಿಗೆ ಸಂಗ್ರಹ ಕಡಿಮೆ ಆಗಿದೆ. ಇದರ ನಡುವೆಯೂ ಅಭಿವೃದ್ಧಿ ಕಾರ್ಯಕ್ಕೆ, ನೀರಾವರಿ ಯೋಜನೆಗೆ ಹಣಕಾಸಿನ ಕೊರತೆ ಆಗದಂತೆ ಶಕ್ತಿ ಮೀರಿ ಪ್ರಯತ್ನಿಸಲಾಗುತ್ತಿದೆ. ಹೆಚ್ಚಿನ ಹಣಕಾಸು ನೆರವು ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ನಾಲ್ಕು ತಿಂಗಳು ಕಳೆದರೆ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಈಗಾಗಲೇ ಬಡವರಿಗೆ ತಲುಪುವಂತಹ ಎರಡು ಪ್ಯಾಕೇಜ್‌ ನೀಡಲಾಗಿದೆ. ಮುಂದೆ ಅನಿವಾರ್ಯವಾದರೆ ಮತ್ತೂಂದು ಪ್ಯಾಕೇಜ್‌ ಘೋಷಿಸಲಾಗುವುದು ಎಂದರು. ಒಂದೆರಡು ದಿನದಲ್ಲಿ ರಾಜ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ವ್ಯಾಕ್ಸಿನ್‌ ಬರಲಿದೆ. ಎಲ್ಲಾ ಜಿಲ್ಲೆಗೂ ಜನಸಂಖ್ಯೆಗೆ ಅನುಗುಣವಾಗಿ ವ್ಯಾಕ್ಸಿನ್‌ ಸಿಗಲಿದೆ ಎಂದರು.

ಜೂ.17, 18ರ ನಂತರ ಕರ್ನಾಟಕದ ಉಸ್ತುವಾರಿ ಅರುಣ್‌ ಸಿಂಗ್‌ ರಾಜ್ಯಕ್ಕೆ ಬರಲಿದ್ದಾರೆ. ಎರಡು ದಿನ ಕರ್ನಾಟಕದಲ್ಲೇ ಇದ್ದು ಒಂದೆರಡು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅರುಣ್‌ ಸಿಂಗ್‌ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು.

Vishwa News 24

Recent Posts

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು – vishwanews24

ಉಡುಪಿ: ವಂಚನೆ ಹಾಗೂ ಬ್ಲ್ಯಾಕ್‌ಮೇಲ್ ಪ್ರಕರಣ ; ಆರೋಪಿ ಝೀನತ್ ವಿರುದ್ಧ ಮತ್ತೆರಡು ಹೊಸ ಪ್ರಕರಣ ದಾಖಲು ಉಡುಪಿ:ಬಹುಕೋಟಿ ವಂಚನೆ…

39 seconds ago

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ – ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ – vishwanews24

ಆಗುಂಬೆ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ - ಮಹತ್ವದ ತೀರ್ಪು ನೀಡಿದ ಶಿವಮೊಗ್ಗ ನ್ಯಾಯಾಲಯ ತೀರ್ಥಹಳ್ಳಿ: ಲೈಂಗಿಕ ದೌರ್ಜನ್ಯಕ್ಕೆ…

39 minutes ago

ಅಯೋಧ್ಯೆ ಪ್ರಕರಣದ ಹಿನ್ನೆಲೆ : ರಾಜ್ಯದ ಎಲ್ಲಾ ಮುಜುರಾಯಿ ದೇಗುಲಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಸಿಎಂ ಆದೇಶ – vishwanews24

ರಾಮ ಮಂದಿರದಲ್ಲಿ ನಡೆದ ಘಟನೆ ಅವಮಾನಕರ; ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡಿದೆ :ಸಿಎಂ  ಡಿ.ಕೆ. ಶಿ ಬೆಳಗಾವಿ: ಮುಜರಾಯಿ…

45 minutes ago

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮಹಿಳೆ ಬಂಧನ – vishwanews24

ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ 10 ಲಕ್ಷ ರೂ.ವಂಚನೆ ಪ್ರಕರಣ: ಮುಂಬಯಲ್ಲಿ ಉಡುಪಿ ಮೂಲದ ಮಹಿಳೆ ಬಂಧನ ಮುಂಬೈ,: ಷೇರು…

58 minutes ago

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು – vishwanews24

ಪುತ್ತೂರು: ಕೋಮು ಪ್ರಚೋದನೆ ಆರೋಪ ;  7 ವೆಬ್ ನ್ಯೂಸ್, ಸಾಮಾಜಿಕ ಜಾಲತಾಣಗಳ ವಿರುದ್ಧ ಪ್ರಕರಣ ದಾಖಲು ಪುತ್ತೂರು: ಪುರುಷರಕಟ್ಟೆಯಲ್ಲಿ…

1 hour ago

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ ; ಪ್ರಕರಣ ದಾಖಲು – vishwanews24

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ  ಮಂಗಳೂರು: ಕೊಡಿಯಾಲಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ…

2 hours ago